29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಸಮಾರಂಭ
On 29th, Dr. D.S. Karki award ceremony
29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಸಮಾರಂಭ
ಬೆಳಗಾವಿ 21: ಡಿಸೆಂಬರ್ 29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಇಲ್ಲಿನ ಡಾ. ಡಿಎಸ್ ಕರ್ಕಿ ಪ್ರತಿಷ್ಠಾನ ಟ್ರಸ್ಟ್ ಪ್ರತಿ ವರ್ಷ ನೀಡುವ ಡಾ ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ 2024 ಗೆ ಪುರಸ್ಕೃತ 3 ಕೃತಿಗಳು ಆಯ್ಕೆಯಾಗಿವೆ. ಕುಮಾರಿ ಮಧು ಕಾರಗಿ, ಬ್ಯಾಡಗಿ ಇವರ ’ತೆರೆಯದ ಬಾಗಿಲು’ ಪ. ಗು. ಸಿದ್ದಾಪುರ, ಕೋಲಾರ ಇವರ ’ಅಕ್ಕರೆ ಅಜ್ಜ ನಾವು ಮತ್ತು ಗಾಂಧಿ ತಾತ’ ಹಾಗೂ ಸುಧಾ ಪಾಟೀಲ, ಬೆಳಗಾವಿ ಇವರ ’ಹೆಜ್ಜೆ ಗುರುತು’ ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ ಪ್ರಧಾನ ಸಮಾರಂಭವು ರವಿವಾರ ದಿನಾಂಕ 29ರಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಲಿದೆ. ಗದಗಿನ ತೋಂಟದಾರ್ಯ ಮಠದ ಪೂಜ್ಯರು ಡಾ ಸಿದ್ದರಾಮ ಸ್ವಾಮೀಜಿಯವರು ಸಾನಿಧ್ಯ ನೀಡಲಿದ್ದಾರೆ.ಇವರೊಡನೆ ತಮ್ಮ ಕೃತಿಗಳನ್ನು ಕಳಿಸಿದ ಎಲ್ಲಾ ಕವಿಗಳಿಗೂ ಹಾರ್ದಿಕವಾಗಿ ಅಭಿನಂದಿಸುತ್ತೇವೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ ಗೀರೀಶ್ ಕರ್ಕಿ ಮತ್ತು ಸತೀಶ್ ಕರ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 