ರಕ್ತಭಂಡಾರ, ಔಷಧಾಲಯ, ಹೋಮ್ ನಸರ್ಿಂಗ್ ಸೇವೆ ಉದ್ಘಾಟನೆ ಉದ್ಘಾಟನೆ ನೆರವೇರಿಸಿದ ಶಾಸಕ ಅಭಯ ಪಾಟೀಲ
ಬೆಳಗಾವಿ, 1: ಸ್ಮಾಟರ್್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಳಗಾವಿ ನಗರದ ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಕೆಎಲ್ಇ ಸಂಸ್ಥೆಯ ಕೊಡುಗೆ ಅಪಾರ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
ಅವರು ಇಂದು ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ, ರಕ್ತಭಂಡಾರ, ಔಷಧಾಲಯ, ಹೋಮ್ ನಸರ್ಿಂಗ್ ಸೇವೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನಗರಗಳು ಬೆಳೆದಂತೆ ಜನಸಂಖ್ಯೆಯು ಅಧಿಕವಾಗುತ್ತದೆ, ಅದೇ ರೀತಿ ಅಭಿವೃದ್ದಿಯ ಕಾರ್ಯಕ್ರಮಗಳು, ಆಥರ್ಿಕ ಚಟುವಟಿಕೆಗಳು ಅಧಿಕವಾಗುತ್ತವೆ. ರೋಗಗಳ ಸಂಖ್ಯೆಯೂ ಅಧಿಕವಾಗುತ್ತದೆ. ಈ ನಿಟ್ಟಿನಲ್ಲಿ ಕನರ್ಾಟಕ ಮಾತ್ರವಲ್ಲದೇ ದೇಶವಿದೇಶಗಳಲ್ಲಿಯೂ ಹೆಸರುವಾಸಿಯಾದ ಕೆ ಎಲ್ ಇ ಸಂಸ್ಥೆಯ ಸೇವೆ ಅಪಾರವೆಂದು ನುಡಿದರು.
ಕಾರ್ಯಕ್ರಮದ ಇನ್ನೊಬ್ಬ ಅತಿಥಿ ಕೆ ಎಲ್ ಇ ಸಂಸ್ಥೆಯ ನಿದರ್ೆಶಕ ಡಾ. ವಿ ಎಸ್ ಸಾಧುನವರ ಮಾತನಾಡುತ್ತ ದಕ್ಷಿಣ ಬೆಳಗಾವಿ ಹಾಗೂ ಆಥರ್ಿಕವಾಗಿ ಹಿಂದುಳಿದ ನಾಗರಿಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯನ್ನು ಕೆ ಎಲ್ ಇ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಲೋಕಾರ್ಪಣೆಗೊಳಿಸಲಾಯಿತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿದರ್ೆಶಕ ಡಾ. ಎಸ್ ಸಿ ಧಾರವಾಡ ವಹಿಸಿದ್ದರು.
ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಜ್ಞ ಡಾ. ಅಶೋಕ ಗೋದಿ ಹಾಗೂ ಮಕ್ಕಳ ತಜ್ಞೆ ಡಾ. ವಿಜಯಲಕ್ಷ್ಮಿ ಕುಲಗೊಡರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ ಎಲ್ ಇ ಹೋಮಿಯೋಪಥೀಕ ಕಾಲೇಜಿನ ಪ್ರಾಂಶುಪಾಲ ಡಾ. ಎಮ್ ಎ ಉಡಚನಕರ, ಹಿರಿಯ ವೈದ್ಯ ಡಾ. ಅಶೋಕ ಪಾಂಗಿ, ಡಾ. ಬಿ ಎಸ್ ಮಹಾಂತಶೆಟ್ಟಿ ಮತ್ತು ಕೆ ಎಲ್ ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ರಕ್ತ ಭಂಡಾರ ಅಧಿಕಾರಿ ಡಾ. ವೀರಗೆ, ಮಾಜಿ ಮೇಯರ ವಿಜಯ ಮೋರೆ, ಮಾಜಿ ನಗರಸೇವಕರಾದ ಸಂಜಯ ಸವಾಶೇರಿ, ರಮೇಶ ಸೊಂಟಕ್ಕಿ, ದೀಪಕ ಮುಚ್ಚಂಡಿ ಹಿರಿಯನಾಗರಿಕ ಸಂಘದ ಅಧ್ಯಕ್ಷ ಗುರುನಾಥ ಶಿಂಧೆ, ಮಾಜಿ ಅಧ್ಯಕ್ಷ ಪ್ರಭಾಕರ ಕುಲಕಣರ್ಿ ಭಾಗವಹಿದ್ದರು.
ಕಾರ್ಯಕ್ರಮವನ್ನು ಅರುಣ ನಾಗಣ್ಣವರ ನಿರೂಪಿಸಿದರು, ಹಿರಿಯ ವೈದ್ಯ ಡಾ. ಬಿಎಸ್ ಮಹಾಂತಶೆಟ್ಟಿ ಸ್ವಾಗತಿಸಿದರು. ಡಾ. ಕಿಶೋರ ಬಂಡಗಾರ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 