ಸಾಮರ್ಥ್ಯ ಅಭಿವೃದ್ಧಿ ತರಬೇತಿ ಆಯೋಜಿಸಿ : ಡಾ.ತಿಪ್ಪೇಸ್ವಾಮಿ ಕೆ.ಟಿ
Organize capacity development training: Dr. Thippeswamy KT
ಕಾರವಾರ 28: ಬಾಲ ಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಕಲಂ 17 ರಡಿಯಲ್ಲಿ ನೇಮಕವಾದ ವಿವಿಧ ಇಲಾಖೆಗಳ ನೀರೀಕ್ಷಕರಿಗೆ ತಮ್ಮ ಕೆಲಸದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಆಯೋಜಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ನಿರ್ದೇಶನ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಕ್ಕಳ ಮತ್ತು ಹದಿಯರೆದವರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ದತಿ ನಿಷೇಧ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ಆಯಾ ತ್ರೈಮಾಸಿಕ ನಡೆಯಬೇಕಾದ ತ್ರೈಮಾಸಿಕ ಸಭೆಯನ್ನು ಕಡ್ಡಾಯವಾಗಿ ಪ್ರತಿ ತಾಲೂಕಿನಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ನಿಗಧಿತ ಅವಧಿಯೊಳಗೆ ನಡೆಯಬೇಕು ಎಂದ ಅವರು, ಜಿಲ್ಲೆಯಲ್ಲಿನ ಕೈಗಾರಿಕೆ, ಹೋಟೆಲ್, ಗ್ಯಾರಜ್, ಕ್ವಾರಿಗಳಿಗೆ ದಿಢೀರ್ ದಾಳಿ ಮಾಡಿ ತಪಾಸಣೆ ಮಾಡಬೇಕು, ತಪಾಸಣೆ ಅವಧಿಯಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ, ಪಂಚಾಯತಿ ಅಥವಾ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿಗೆ ಮಾಹಿತಿ ಮುಂದೆ ಕಡ್ಡಾಯವಾಗಿ ಹಾಜರು ಪಡಿಸಬೇಕು ಹಾಗೂ ಆ ವ್ಯಾಪ್ತಿಯ ಶಾಲೆಯ ಮುಖ್ಯ ಶಿಕ್ಷಕರಿಂದ ಹಾಜರಾತಿ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೋಂ ಕೇರ್ ಏಜೆನ್ಸಿಯವರು 18 ವರ್ಷದೊಳಗಿನ ಹೆಣ್ಣುಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ಬಗ್ಗೆ ಆಯೋಗಕ್ಕೆ ದೂರುಗಳು ಸಲ್ಲಿಕೆಯಾಗುತ್ತಿದ್ದು, ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳುವಂತೆ ಹಾಗೂ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆ ಬಿಟ್ಟ ಮಕ್ಕಳ ವಿವರಗಳನ್ನು ಕಾರ್ಮಿಕ ಇಲಾಖೆಗೆ ವಿನಿಮಯ ಮಾಡುವುದರ ಮೂಲಕ ಮಕ್ಕಳ ರಕ್ಷಣೆಯ ಜೊತೆ ಅವರ ಶಿಕ್ಷಣಕ್ಕೂ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತಾಗಬೇಕು ಎಂದ ಅವರು , ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗ:ಳ ಕುರಿತು ಶಾಲೆಗಳಲ್ಲಿ ಮಾಹಿತಿ ನೀಡುವುದರ ಮೂಲಕ ಕಾರ್ಮಿಕ ಮಕ್ಕಳಿಗೆ ಸೌಲಭ್ಯ ಪಡೆಯಲು ಉತ್ತೇಜನೆ ನೀಡುವಂತಾಗಬೇಕು ಎಂದರು.
18 ವರ್ಷದೊಳಗಿನ ಮಕ್ಕಳಿಗೆ, ಅಂಗನವಾಡಿ ಮತ್ತು ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳ ಸಿಎಸ್ಆರ್ ನಿಧಿಯಿಂದ ಬಳಸಲಾದ ಮತ್ತು ಸಿಎಸ್ಆರ್ ನಿಧಿ ಎಷ್ಟು ಸಂಗ್ರಹವಾಗಿದೆ ಎಂಬುದರ ಕುರಿತು ವರ್ಷವಾರು ಮಾಹಿತಿ ಒಳಗೊಂಡ ವರದಿಯನ್ನು ನೀಡುವಂತೆ ಕೈಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 