ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ
P.V. Hiremath elected as President of Yuva Chintana Samavesh-25
ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ.
ದಾರವಾಡ 31 : ಸಾಮಾಜಿಕ ಜಾಲತಾಣ, ರೀಲ್ಸಗಳ ವ್ಯಾಮೋಹ ಜಾತಿ, ಧರ್ಮಗಳಂತಹ ವಿಷಯದಲ್ಲಿ ಸಿಕ್ಕಿಹಾಕಿಕೊಂಡ ಯುವ ಸಮುದಾಯ ಇವಾಗ ಎಚ್ಚೆತ್ತುಕೊಳ್ಳದಿದ್ದರೆ ದೇಶದ ಪ್ರಗತಿ ಅಸಾಧ್ಯ ಈ ನಿಟ್ಟಿನಲ್ಲಿ ಪ್ರತಿಷ್ಠಾನವು ಯುವಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಪರಿಸರವಾದಿ, ನೇಚರ್ ಫಸ್ಟ್ ಇಕೋ ವಿಲೇಜ್ ನ ಸಂಸ್ಥಾಪಕರಾದ ಪಿ ವ್ಹಿ ಹಿರೇಮಠ ಹೇಳಿದರು.ಅವರು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನವು ಫೆಬ್ರುವರಿ 15 ರಂದು ಹಮ್ಮಿಕೊಳ್ಳುತ್ತಿರುವ ಯುವ ಚಿಂತನಾ ಸಮಾವೇಶಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪರಿಸರ ತಜ್ಞ ಪಿ.ವಿ ಹಿರೇಮಠ ಅವರಿಗೆ ಆಹ್ವಾನ ನೀಡಿದ ಸಂದರ್ಶನದಲ್ಲಿ ಮಾತನಾಡಿ ಪ್ರತಿಷ್ಠಾನ ಹಮ್ಮಿಕೊಳ್ಳುವ ಎಲ್ಲ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾದ ಮತ್ತು ಯುವ ಸಮುದಾಯವನ್ನು ಜಾಗೃತಿ ಮಾಡುವ ನಿಟ್ಟಿನಲ್ಲಿ ಇರುತ್ತವೆ ಎಂದು ಹೇಳಿದರು. ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪಿ.ವಿ ಹಿರೇಮಠ ಅವರನ್ನು ಪ್ರತಿಷ್ಠಾನದ ಪದಾಧಿಕಾರಿಗಳು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ, ಪ್ರದಾನ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಉಪಾಧ್ಯಕ್ಷ ಸುರೇಶ ಬೆಟಗೇರಿ, ಕೋಶಾಧ್ಯಕ್ಷ ಪ್ರೇಮಾನಂದ ಶಿಂಧೆ, ಇಂಜನಿಯರ್ಸ ಅಸೋಸಿಯೇಷನ್ ಅಧ್ಯಕ್ಷರಾದ ಸುನೀಲ ಬಾಗೇವಾಡಿ, ಕೃಷ್ಣಮೂರ್ತಿ ಗೊಲ್ಲರ ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 