ಪಾಲಕರ ದೂರು: ರಾಜೀವಗಾಂಧಿ ವಿದ್ಯಾಲಯಕ್ಕೆ ಮನ್ನಿಕೇರಿ ಭೇಟಿ
ಧಾರವಾಡ 29: ವಿದ್ಯಾಥರ್ಿಗಳನ್ನು ಫೀ ಹಣ ಕೊಡದಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡದಿರುವದು ಮತ್ತು ಹೊರಗೆ ನಿಲ್ಲಿಸಿದ್ದರ ಕುರಿತು ಪಾಲಕರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಗಜಾನನ ಮನ್ನಿಕೇರಿ ಅವರು ಇಂದು (29/11/2019), ಧಾರವಾಡದ ರಾಜೀವಗಾಂಧಿ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯಾಗಿ ಮಕ್ಕಳನ್ನು ಹೊರಗೆ ನಿಲ್ಲಿಸುವುದು, ಫೀ ಹಣಕ್ಕಾಗಿ ಮಕ್ಕಳಿಗೆ ಒತ್ತಾಯ ಮಾಡುವುದು, ದೈಹಿಕ ಮಾನಸಿಕ ಹಿಂಸೆ ನೀಡುವುದು ಶಿಕ್ಷಣ ಹಕ್ಕಿನ ಉಲ್ಲಂಘನೆಯಾಗುತ್ತದೆ. ಇನ್ನು ಮುಂದೆ ಈ ರೀತಿಯಾಗಿ ಯಾವುದೇ ಘಟನೆಗಳು ಘಟಿಸದಂತೆ ಶಾಲಾ ಮುಖ್ಯ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶೈಕ್ಷಣಿಕ ಮೇಲ್ವಿಚಾರಕರು ಈ ಬಗ್ಗೆ ಖುದ್ದಾಗಿ ನಿಗಾವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜೀವಗಾಂಧಿ ವಿದ್ಯಾಲಯದ ಪರಿಶೀಲನೆ ಸಂದರ್ಭದಲ್ಲಿ ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ.ಎ ಖಾಜಿ ಹಾಗೂ ಕೆ.ಎಫ್ ಜಾವೂರ, ಶಾಲೆಯ ಮುಖ್ಯ ಶಿಕ್ಷಕರಾದ ಯಡಾಳ ಮತ್ತು ಹಾದಿಮನಿ, ಆಡಳಿತ ಮಂಡಳಿ ಸದಸ್ಯ ಸಿ ಬಿ ಕನವಳ್ಳಿ ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 