'ಪಾಲಕರು ಮಕ್ಕಳ ಸಾಮಥ್ರ್ಯ ಗುತರ್ಿಸಿ ಪ್ರೋತ್ಸಾಹ ನೀಡಿ'
ಲೋಕದರ್ಶನ ವರದಿ
ರಾಯಬಾಗ 20: ಮಕ್ಕಳ ಸಾಮಥ್ರ್ಯವನ್ನು ಗುತರ್ಿಸಿ ಅವರು ಆಸಕ್ತಿ ಹೊಂದಿದ ವಿಷಯದಲ್ಲಿ ಮುಂದುವರೆಯಲು ಪಾಲಕರು ಪ್ರೋತ್ಸಾಹ ನೀಡಬೇಕು. ಇದರಿಂದ ಅವರಲ್ಲಿರುವ ಸೃಜನಾತ್ಮಕ ಕಲೆ ಹೊರಹೊಮ್ಮುತ್ತದೆ ಎಂದು ಹುಬ್ಬಳ್ಳಿಯ ಸಿ.ಎ ನಟರಾಜ್ ಮುಶರ್ಿಲ್ಲಿ ಹೇಳಿದರು.
ಶನಿವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಲಕ್ಷ್ಮೀಸೇನ ಶಿಕ್ಷಣ ಸಂಸ್ಥೆಯ ಮಹಾವೀರ ವಸತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಅತೀಯಾದ ಕಟ್ಟುಪಾಡುಗಳನ್ನು ವಿಧಿಸದೇ ಸ್ವಾತಂತ್ರ ಕೊಟ್ಟು, ಸ್ನೇಹಿತರಂತೆ ಬೆಳಸಬೇಕು. ತಪ್ಪು ದಾರಿಗೆ ಹೋಗುತ್ತಿರುವುದು ಕಂಡ ಬಂದರೆ ಸನ್ಮಾರ್ಗದಲ್ಲಿ ನಡೆಯುವಂತೆ ತಿಳಿ ಹೇಳಿ, ಸಮಾಜದಲ್ಲಿ ಒಳ್ಳೆಯ ನಾಗರೀಕನಾಗಿ ಬೆಳೆಯುವಂತೆ ಮಾರ್ಗದರ್ಶನ ನೀಡಬೇಕೆಂದು ಕಿವಿ ಮಾತು ಹೇಳಿದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ವಸುಮತಿ ಶಿಂದೆ, ಶೀತಲ ಬೇಡಕಿಹಾಳೆ, ಸಂಜು ಬಡೋರೆ, ಡಾ.ಅಜೀತ ನಾಯಿಕ ಸೇರಿದಂತೆ ಶಿಕ್ಷಕರು, ಸಿಬ್ಬಂದಿ, ಪಾಲಕರು ಮತ್ತು ವಿದ್ಯಾಥರ್ಿಗಳು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 