ಗ್ರಾಮ ಲೆಕ್ಕಾಧಿಕಾರಿ ಪಟೇಲರ ಮೇಲೆ ಹಲ್ಲೆ ಖಂಡಿಸಿ ಮನವಿ
ಲೋಕದರ್ಶನ ವರದಿ
ರಾಯಬಾಗ 25: ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಪಟೇಲ ಸಾಹೇಬ ಇವರ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣರಾದವರನ್ನು ಶಿಕ್ಷೆಗೆ ಗುರುಪಡಿಸುವಂತೆ ಆಗ್ರಹಿಸಿ ಕನರ್ಾಟಕ ರಾಜ್ಯ ನೌಕರರ ಸಂಘ ರಾಯಬಾಗ ಘಟಕ ಪದಾಧಿಕಾರಿಗಳು ತಹಶೀಲ್ದಾರ ಡಿ.ಎಸ್.ಜಮಾದಾರ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.
ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಗ್ರಾಮಲೆಕ್ಕಾಧಿಕಾರಿ ಪಟೇಲ ಸಾಹೇಬ ಇವರ ಮೇಲೆ ಲಾರಿ ಹಾಯಿಸಿ ಹಲ್ಲೆ ನಡೆಸಿದ್ದು ಹಾಗೂ ಸಾವಿಗಿಡಾಗಿರುವ ಘಟನೆ ಖಂಡಿಸಿದ ನೌಕರರ ಸಂಘದ ಪದಾಧಿಕಾರಿಗಳು, ಈ ಕೃತ್ಯ ಎಸಗಿದ ವ್ಯಕ್ತಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು. ಸೂಕ್ಷ್ಮ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ತಮ್ಮ ಮನವಿಯಲ್ಲಿ ಆಗ್ರಹಿಸಿದ್ದಾರೆ.
ನೌಕರರ ಸಂಘದ ಅಧ್ಯಕ್ಷ ಆಯ್.ಆರ್.ನದಾಫ, ವಿ.ಜಿ.ಹಾರೂಗೇರಿ, ಆರ್.ಎಮ್.ಡಬ್ಬಗೋಳ, ಎಸ್.ಎಚ್.ಕಾಂಬಳೆ, ವಿ.ವಿ.ಕುದರಿ, ಎಸ್.ಆರ್.ಕೋಡಿಕಪ್ಪಮಠ, ಸಿ.ಆಯ್.ಮೊಕಟಗಿ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 