ಹೋಳಿ ಹಬ್ಬದ ನಿಮಿತ್ಯ ಶಾಂತಿ ಪಾಲನೆ ಸಭೆ
Peacekeeping meeting on the occasion of Holi festival
ಯರಗಟ್ಟಿ, 28 : ಸಮೀಪದ ಗ್ರಾಮದಲ್ಲಿ ಹೋಳಿ ಹಬ್ಬ ಐತಿಹಾಸಿಕ ಮಹತ್ವ ಹೊಂದಿದ್ದು, ಯಾವುದೇ ರೀತಿಯ ಗೊಂದಲ ಗಲಾಟೆಗಳಿಗೆ ಅವಕಾಶ ನೀಡದಂತೆ ಶಾಂತಿಯುತ ಹಬ್ಬ ಆಚರಣೆ ನಡೆಯಲಿ ಎಂದು ಮುರಗೋಡ ಠಾಣೆ ಪಿಎಸ್ಐ ಡಬ್ಲೂ.ಎಚ್.ಯಾದವಾಡ ಹೇಳಿದರು. ಗ್ರಾಮದ ಮಾರುತಿ ಮಂದಿರ ಸಭಾಭವನದಲ್ಲಿ ಹೋಳಿ ಹಾಗೂ ರಂಜಾನ ಹಬ್ಬದ ಅಂಗವಾಗಿ ಶುಕ್ರವಾರ ಹಮ್ಮಿಕೊಡಿದ್ದ ಶಾಂತಿ ಪಾಲನೆ ಸಭೆಯಲ್ಲಿ ಮಾತನಾಡಿದರು. ಪಿಡಿಒ ರಾಘವೇಂದ್ರಕುಮಾರ ಎಸ್.ಪಿ, ಮಾತನಾಡಿ, ಗ್ರಾಮದ ಯುವಕರು ವಾರ್ನಿಸ ತತ್ತಿ ಎಸೆಯುವದನ್ನು ನಿಷೇಧಿಸಲಾಗಿದ್ದು. ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಬೇಕು ದ್ವಿತೀಯ ಪಿಯುಸಿ ಪರೀಕ್ಷೆ ಇರುವದರಿಂದ ಬಲವಂತವಾಗಿ ಬಣ್ಣ ಎರಚಬಾರದು ಎಂದರು.ಹುಸೇನಬಿ ಕುದರಿ, ಮಹಾದೇವ ಬೆನಕಟ್ಟಿ, ಪಕ್ರುಸಾಬ ಬಾಗವಾನ, ನೀಲಕಂಠ ಹಂಜಿ, ಬಸವಣ್ಣೆಪ್ಪ ಕಲಬಸನ್ನವರ, ಮಂಜುನಾಥ ಬಂದಕನವರ, ಅರುಣ ವನ್ನೂರ, ಪರಸಪ್ಪ ಮಾದರ ಸಂಜೀವಿನಿ ಮಹಿಳಾ ಸಂಘದ ಸದಸ್ಯರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 