ವ್ಯಕ್ತಿ ನಾಪತ್ತೆ - ಪತ್ತೆಗೆ ಮನವಿ
Person Missing- appeal to find
ಬಳ್ಳಾರಿ 13: ನಗರದ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ವಟ್ಟಪ್ಪಗೇರಿಯ ನಿವಾಸಿ ಯೇಸುದಾಸ್ ಎನ್ನುವ 43 ವರ್ಷದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.ಘಟನೆಯ ವಿವರ:
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಜ್ಯೋತಿ ಎಂಬುವವರ ಪತಿ ಯೇಸುದಾಸ್ ಎಂಬುವವರು 2022ರ ಜ.02 ರಿಂದ ನಾಪತ್ತೆಯಾಗಿದ್ದಾರೆ. ದೂರಿನ ಅನ್ವಯ ತಾವು ಸಾಲ ಮಾಡಿಕೊಂಡಿರುವುದಾಗಿಯೂ ಮತ್ತು ಸಾಲಗಾರರು ಹಣ ಮರಳಿಸುವಂತೆ ಕೇಳುತ್ತಿದ್ದಾರೆ ಎಂದು ಪತ್ನಿಗೆ ತಿಳಿಸಿದ್ದರು. ಅಂದಿನಿಂದ ಅವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.ವ್ಯಕ್ತಿಯ ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೆಇಬಿ ಲೈನ್ ಮ್ಯಾನ್ ಕೆಲಸ ಮಾಡುತ್ತಿರುತ್ತಾನೆ. ಮನೆಯಿಂದ ಹೊರಡುವಾಗ ಯಾವ ಬಟ್ಟೆ ಧರಿಸಿದ್ದನು ಎಂಬ ಮಾಹಿತಿ ಲಭ್ಯವಿಲ್ಲ.ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆ ದೂ.08392-240731, 244145, ಬಳ್ಳಾರಿ ಕಂಟ್ರೋಲ್ ರೂಂ 08392-258100, ಕೌಲ್ ಬಜಾರ್ ಠಾಣೆ ಪಿಐ ಮೊ.9480803047, ಪಿ.ಎಸ್.ಐ 94808203084, 9480803085 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 