ಶರಣ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಕವಿ ಟಿ.ಎಂ. ನಾಗಭೂಷಣ ಆಯ್ಕೆ
Poet T.M. Nagabhushan elected as president of Sharan Sahitya Parishad
ಹೂವಿನಹಡಗಲಿ 19: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾಗಿ ಪಟ್ಟಣದ ಕವಿ ಟಿ. ಎಂ. ನಾಗಭೂಷಣರನ್ನು ಅವಿರೋಧ ಆಯ್ಕೆ ಮಾಡಲಾಯಿತು.ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಶನಿವಾರ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಯುವ ಘಟಕದ ಅಧ್ಯಕ್ಷರಾಗಿ ದಯಾನಂದ ಎಂ. ಕದಳಿ ವೇದಿಕೆ ಅಧ್ಯಕ್ಷರಾಗಿ ಡಾ. ಶೈಲಜ ಪವಾಡಶೆಟ್ರ ಆಯ್ಕೆಯಾದರು. ಸಾನಿಧ್ಯವನ್ನು ಗವಿಸಿದ್ದೇಶ್ವರ ಮಠದ ಡಾ. ಹಿರಿಶಾಂತವೀರ ಮಹಾಸ್ವಾಮಿಗಳು ವಹಿಸಿದ್ದರು. ಅಧ್ಯಕ್ಷತೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವಿಜಯನಗರ ಜಿಲ್ಲಾಧ್ಯಕ್ಷರಾದ ಡಾ. ಕೆ. ರವೀಂದ್ರನಾಥ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಎನ್. ಎಂ. ರವಿಕುಮಾರ್, ಹರಪನಹಳ್ಳಿ ತಾಲೂಕಿನ ಅಧ್ಯಕ್ಷ ರಾಜಶೇಖರ ಬಣಕಾರ, ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಎಂ. ಮಂಜುನಾಥಸ್ವಾಮಿಜಿ, ಹಿರಿಯ ಸಾಹಿತಿ ತೋ. ಮ. ಶಂಕ್ರಯ್ಯ, ಎಸ್. ದ್ವಾರಕೀಶ್ ರೆಡ್ಡಿ, ಪಿ. ಎಂ. ಕೊಟ್ರಸ್ವಾಮಿ, ಹೆಚ್. ಜಿ. ಪಾಟೀಲ್, ದಳವಾಯಿ ಹಾಲೇಶ, ಹೆಚ್. ಬಿ. ರಾಜಣ್ಣ, ಎಸ್. ಸುನೀತಾ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 