ಸಚಿವತಿಮ್ಮಾಪೂರ ವಿರುದ್ಧರಾಜಕೀಯ ಪ್ರೇರಿತ ಆರೋಪ : ಸಿಂಗಾಡಿ
Politically motivated allegations against Minister Thimmapur: Singadi
ರಬಕವಿ-ಬನಹಟ್ಟಿ 01: ಅಬಕಾರಿ ಸಚಿವಆರ್.ಬಿ.ತಿಮ್ಮಾಪೂರ ಅವರ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ವಿರೋಧ ಪಕ್ಷ ಬಿಜೆಪಿಗೆ ಆತಂಕ ಉಂಟಾಗಿದ್ದು. ಅದನ್ನು ಸಹಿಸಿಕೋಳ್ಳಲಾಗದೆ ಬಿಜೆಪಿಗರು ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಚಿದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಹೇಳಿದರು.
ಅವರು ರಬಕವಿಯ ನೀರಿಕ್ಷಣಾ ಮಂದಿರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲಿ ಮಾತನಾಡಿ,ಸಚಿವ ತಿಮ್ಮಾಪೂರವರು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿದ್ದು. ಅವರ ಕಾರ್ಯಶೈಲಿ ಹಾಗೂ ಆಡಳಿತ ಕ್ರಮಗಳು ಜಪಪರವಾಗಿರುವುದನ್ನು ಸಹಿಸಿಕೊಳ್ಳಲಾಗದೆ ಹತಾಶೆಯಿಚಿದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಂಗಮೇಶ ಮಡಿವಾಳರ ಮಾತನಾಡಿ, ಬಿಜೆಪಿ ತನ್ನರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಮೇಲೆ ನಿರಾಧಾರ ಆರೋಪಗಳನ್ನು ಮಾಡುತ್ತಿದೆ. ಯಾವುದೇಆರೋಪ ಬಂದ ತಕ್ಷಣವೇ ಯಾರನ್ನು ಅಪರಾಧಿಯೆಂದು ಕರೆಯಲು ಸಾಧ್ಯವಿಲ್ಲ. ಆದರೆ ವಿರೋಧ ಪಕ್ಷವುತನ್ನ ವೈಫಲ್ಯವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 