ಇಂದು ಮಹರ್ಷಿ ವಾಲ್ಮೀಕಿ ಜಾತ್ರೆಯ ನಿಮಿತ್ಯ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಗಳ ಆಗಮನ
Prasannanandpuri Maha Swamiji arrives today on the occasion of Maharishi Valmiki Jatra
ಗದಗ 08 : ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ವತಿಯಿಂದ ಜಿಲ್ಲಾಮಟ್ಟದ ಸಭೆಯನ್ನು ಕರೆಯಲಾಗಿದೆ ಪ್ರತಿ ವರ್ಷದಂತೆ ಫೆಬ್ರವರಿ 08 ಮತ್ತು 09 ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಐತಿಹಾಸಿಕ 8 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ.9 ಮಂಗಳವಾರ ಬೆಳಿಗ್ಗೆ 10ಘಂಟೆಗೆ ಗದಗ ನಗರದ ವಾಲ್ಮೀಕಿ ಭವನದಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಯವರ ದಿವ್ಯ ಸಾನಿದ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ -2026 ರ ಪೂರ್ವಭಾವಿ ಸಭೆ ಜರುಗಲಿದೆ.
ಕಾರಣ ಗದಗ ತಾಲೂಕು ಸೇರಿದಂತೆ ಲಕ್ಷ್ಮೇಶ್ವರ. ಶಿರಹಟ್ಟಿ. ಮುಂಡರಗಿ. ರೋಣ. ನರಗುಂದ. ಗಜೇಂದ್ರಗಡ. ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಗುರು ಹಿರಿಯರು, ಸಮಾಜದ ಜನಪ್ರತಿನಿಧಿಗಳು, ನೌಕರ ಬಾಂಧವರು, ಯುವಕರು, ಮಹಿಳೆಯರು, ಗದಗ ಜಿಲ್ಲಾ ಸುತ್ತಮುತ್ತ ಎಲ್ಲ ಗ್ರಾಮದ ವಾಲ್ಮೀಕಿ ನಾಯಕ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಹಾಗೂ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಗದಗ ಜಿಲ್ಲಾಧ್ಯಕ್ಷರಾದ ಬಸವರಾಜ.ಎಮ್. ಬೆಳಧಡಿ ಅವರು ಮತ್ತು ಯುವ ಘಟಕದ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಸಿದ್ದಮ್ಮನಹಳ್ಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 