ಪ್ರಸಾರ ಭಾರತಿ 'ಸ್ವಾಯತ್ತತೆ' ಮುಂದುವರಿಯಲಿದೆ
ನವದೆಹಲಿ 4 (ಯುಎನ್ಐ): ಪ್ರಸಾರ ಭಾರತಿ ಹೊಂದಿರುವ ಸ್ವಾಯತ್ತತೆ ಮಹತ್ವದ್ದಾಗಿದ್ದು, ಅದನ್ನು ಹಾಗೆಯೇ ಮುಂದುವರಿಸಲಗುವುದು ಎಂದು ಕೇಂದ್ರ ವಾತರ್ಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಮಂಗಳವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ದೂರದರ್ಶನ ಸುದ್ದಿ ವಿಭಾಗ ಹೊಸದಾಗಿ ಪಡೆದುಕೊಂಡಿರುವ 17 ಡಿಜಿಟಲ್ ಸ್ಯಾಟಲೈಟ್ ಸುದ್ದಿ ಸಂಗ್ರಹ ( ಡಿ ಎಸ್ ಎನ್ ಜಿ) ವ್ಯಾನ್ ಗಳಿಗೆ ಹಸಿರು ನಿಶಾನೆ ತೋರಿಸಿದ ನಂತರ ಅವರು ಮಾತನಾಡುತ್ತಿದ್ದರು.
ಪ್ರಸಾರ ಭಾರತಿ, ಡಿಜಿಟಲ್ ವಿಸ್ತರಣೆ ಯುಗದಲ್ಲಿ ಹೊಸ ಹೊಸ ಮಾರ್ಗಗಳನ್ನು ಸಂಶೋಧಿಸಬೇಕು. ಕಳೆದ ಐದು ವರ್ಷಗಳಲ್ಲಿ ದೂರದರ್ಶನ ತನ್ನ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿಕೊಂಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ವಾತರ್ಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದಶರ್ಿ ಅಮಿತ್ ಖರೆ, ನಿಖರ ಸುದ್ದಿ ಪ್ರಸಾರದಿಂದಾಗಿ, ದೂರದರ್ಶನ ಹಾಗೂ ಅಕಾಶವಾಣಿ ಇನ್ನಿತರ ವಾಹಿನಿಗಳಿಗಿಂತ ಸಾಕಷ್ಟು ಮುಂದಿದ್ದು, ಜನರ ವಿಶ್ವಾಸಾರ್ಹತೆ ಉಳಿಸಿಕೊಂಡಿದೆ ಎಂದು ಹೇಳಿದರು. ಪ್ರಸಾರ ಭಾರತಿ ಅಧ್ಯಕ್ಷ ಎ. ಸೂರ್ಯಪ್ರಕಾಶ್ ಹಾಗೂ ಸಿಇಓ ಶಶಿ ಶೇಖರ್ ವೆಂಪತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 