ಹಿಡಕಲ್ನಲ್ಲಿ ಪತ್ರಿಕಾ ದಿನಾಚರಣೆ
Press Day Celebration at Hidkal
ರಾಯಬಾಗ 02: ಸಂವಿಧಾನದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತದೆ ಎಂದು ಹಾರೂಗೇರಿ ಸಿದ್ದೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಟಿ ಎಸ್ ವಂಟಗೂಡಿ ಹೇಳಿದರು.ಬುಧವಾರ ತಾಲೂಕಿನ ಹಿಡಕಲ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜುಲೈ 1 ಕನ್ನಡ ಪತ್ರಿಕೋದ್ಯಮದ ಇತಿಹಾಸ ಪರಂಪರೆ ಮತ್ತು ಸೇವೆಯನ್ನು ಸ್ಮರಿಸುವ ದಿನವಾಗಿದೆ. ಪತ್ರಕರ್ತರು ಎಲ್ಲಿಯವರೆಗೆ ಎಚ್ಚರವಾಗಿರುತ್ತಾರೋ ಅಲ್ಲಿಯವರೆಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಶುದ್ಧವಾಗಿರುತ್ತದೆ. ಅನ್ಯಾಯ ಆದವರಿಗೆ ನ್ಯಾಯ ದೊರಕಿಸುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ ಎಂದರು. ಶಾಲೆ ಪ್ರಧಾನ ಗುರು ಬಿ ಎಲ್ ಘಂಟಿ, ಟಿ ಆರ್ ಕೋಳಿ, ಮಾಲೂತಾಯಿ ಪಾರ್ಥನಹಳ್ಳಿ, ಭಾರತಿ ಹಳ್ಳೆಪ್ಪಗೋಳ, ಜಯಶ್ರೀ ಹಳ್ಳೂರ, ಪ್ರಭಾವತಿ ರಾಯಮಾನೆ, ಪದ್ಮಾವತಿ ನಾಯ್ಕ, ಲಕ್ಷ್ಮೀ ಬಡಿಗೇರ, ಗಾಯತ್ರಿ ಹೆಚ್ ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 