ಹಿಡಕಲ್ನಲ್ಲಿ ಪತ್ರಿಕಾ ದಿನಾಚರಣೆ
Press Day Celebration at Hidkal
ರಾಯಬಾಗ 02: ಸಂವಿಧಾನದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತದೆ ಎಂದು ಹಾರೂಗೇರಿ ಸಿದ್ದೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಟಿ ಎಸ್ ವಂಟಗೂಡಿ ಹೇಳಿದರು.ಬುಧವಾರ ತಾಲೂಕಿನ ಹಿಡಕಲ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜುಲೈ 1 ಕನ್ನಡ ಪತ್ರಿಕೋದ್ಯಮದ ಇತಿಹಾಸ ಪರಂಪರೆ ಮತ್ತು ಸೇವೆಯನ್ನು ಸ್ಮರಿಸುವ ದಿನವಾಗಿದೆ. ಪತ್ರಕರ್ತರು ಎಲ್ಲಿಯವರೆಗೆ ಎಚ್ಚರವಾಗಿರುತ್ತಾರೋ ಅಲ್ಲಿಯವರೆಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಶುದ್ಧವಾಗಿರುತ್ತದೆ. ಅನ್ಯಾಯ ಆದವರಿಗೆ ನ್ಯಾಯ ದೊರಕಿಸುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ ಎಂದರು. ಶಾಲೆ ಪ್ರಧಾನ ಗುರು ಬಿ ಎಲ್ ಘಂಟಿ, ಟಿ ಆರ್ ಕೋಳಿ, ಮಾಲೂತಾಯಿ ಪಾರ್ಥನಹಳ್ಳಿ, ಭಾರತಿ ಹಳ್ಳೆಪ್ಪಗೋಳ, ಜಯಶ್ರೀ ಹಳ್ಳೂರ, ಪ್ರಭಾವತಿ ರಾಯಮಾನೆ, ಪದ್ಮಾವತಿ ನಾಯ್ಕ, ಲಕ್ಷ್ಮೀ ಬಡಿಗೇರ, ಗಾಯತ್ರಿ ಹೆಚ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 