ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ
ಹಳಿಯಾಳ 11: ಟಿಪ್ಪು ಸುಲ್ತಾನ ಜನ್ಮ ದಿನಾಚರಣೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ ಘಟಕದವರು ಶನಿವಾರ ದಿಢೀರ ಸಾಂಕೇತಿಕ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಶಿವಾಜಿ ವೃತ್ತಕ್ಕೆ ತೆರಳಿ ಅಶ್ವಾರೂಢ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಮಾಜಿ ಶಾಸಕ ಹಾಗೂ ಭಾಜಪ ಮುಖಂಡ ಸುನೀಲ ಹೆಗಡೆ ಮಾತನಾಡಿ ಇಂದು ಹಿಂದವಿ ಸ್ವರಾಜ್ಯ ಸಂಸ್ಥಾಪಕರಾದ ಅಪ್ರತಿಮ ದೇಶಭಕ್ತ ಛತ್ರಪತಿ ಶಿವಾಜಿ ಮಹಾರಾಜರು ಮಹಾನ್ ಕ್ರೂರಿ ಅಫ್ಝಲಖಾನ್ ರನ್ನು ಸಂಹರಿಸಿದ ದಿನವಾಗಿದ್ದು ನಮಗೆಲ್ಲರಿಗೂ ಶೌರ್ಯದ ದಿನವಾಗಿದೆ ಎಂದರು. ಹಾಗೂ ಈ ಸಂದರ್ಭದಲ್ಲಿ ಟಿಪ್ಪು ಜನ್ಮದಿನಾಚರಣೆಯನ್ನು ಖಂಡಿಸುವ ಧ್ಯೋತಕವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಕೈಗಳಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡಿದ್ದರು.
ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಪ್ರಮುಖರಾದ ಸಂತೋಷ ಘಟಕಾಂಬ್ಳೆ, ಅನಿಲ ಮುತ್ನಾಳೆ, ಸಂತಾನ ಸಾವಂತ, ವಾಸುದೇವ ಪೂಜಾರಿ, ವಿಜಯಕುಮಾರ ಬೋಬಾಟಿ, ಅನಿಲ ಗಿರಿ, ನಾರಾಯಣ ಬೆಳಗಾಂವಕರ, ಪ್ರದೀಪ ಹಿರೇಕರ, ಆನಂದ ಕಂಚನಾಳಕರ, ಹನುಮಂತ ಚಲವಾದಿ, ಯಲ್ಲಪ್ಪಾ ಹೊನ್ನೋಜಿ, ವಿಲಾಸ ಯಡವಿ, ಚಂದ್ರಕಾಂತ ಕಮ್ಮಾರ, ಉಲ್ಲಾಸ ಬಿಡಿಕರ ಮೊದಲಾದವರು ಪಾಲ್ಗೊಂಡಿದ್ದರು ಎಂದು ಭಾಜಪ ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 