ಮಕ್ಕಳಿಗೆ ಬಿಸಿಯೂಟ ರುಚಿ-ಶುಚಿಯಾದ ಪೌಷ್ಠಿಕ ಆಹಾರ ಒದಗಿಸಿ: ಡಾ.ಈಶ್ವರ ಉಳ್ಳಾಗಡ್ಡಿ
Provide hot meals, tasty, clean and nutritious food to children: Dr. Ishwara Ullagadi
ಬೆಳಗಾವಿ 25: ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಇವರು ದಿನಾಂಕ: 25-11-2025 ರಂದು ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, ಕೆಂಗಾನೂರ. ತಾ: ಬೈಲಹೊಂಗಲ ಜಿ: ಬೆಳಗಾವಿ ಇಲ್ಲಿಗೆ ಸಂದರ್ಶನ ನೀಡಿದರು. ವಿದ್ಯಾರ್ಥಿಗಳ ಕಲಿಕೆಯನ್ನು ವರ್ಗವಾರು ಮತ್ತು ವಿದ್ಯಾರ್ಥಿವಾರು ಪರೀಶೀಲನೆ ಮಾಡಿದರು.
ಎಸ್.ಎಸ್.ಎಲ್.ಸಿ ಪಲಿತಾಂಶ ಸುಧಾರಣೆಗಾಗಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.ಎಲ್ಲಾ ಮಕ್ಕಳು ಆರಂಭಿಕ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯವನ್ನು ಗಳಿಸುವಂತೆ ಎಲ್ಲಾ ಶಿಕ್ಷಕರು ಕ್ರಮವಹಿಸಲು ಸೂಚಿಸಿದರು. ಮಕ್ಕಳೊಂದಿಗೆ ಬಿಸಿಯೂಟವನ್ನು ಸವಿದು ರುಚಿ-ಶುಚಿಯಾದ ಆಹಾರ ಪೂರಕ ಪೌಷ್ಠಿಕ ಆಹಾರ ಒದಗಿಸಲು ತಿಳಿಸಿದರು.ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಗಮನಹರಿಸಲು ತಿಳಿಸಲಾಯಿತು.
ಮಕ್ಕಳು ಗೈರಾಗದಂತೆ ಟ್ರ್ಯಾಕಿಂಗ್ ಮಾಡಲು ತಿಳಿಸಿದರು. ಪ್ರತಿಯೊಂದು ಮಗುವಿನ ಕಲಿಕೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರು ಶ್ರಮವಹಿಸುವಂತೆ ತಿಳಿಸಿದರು. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಪಡೆಯಲು ಶಿಕ್ಷಕರು ಕೆಲಸ ಮಾಡಬೇಕು ಇಲ್ಲಾವಾದಲ್ಲಿ ನಿಯಮಾನುಸಾರ ಸೂಕ್ತಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 