ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ
ಲೋಕದರ್ಶನ ವರದಿ
ತಾಳಿಕೋಟೆ: ಪಟ್ಟಣದ ವಾರ್ಡ ನಂ. 1 ಆಶ್ರಯ ಬಡಾವಣೆ ಹಾಗೂ ವಾರ್ಡ ನಂ. 3 ರಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪುರಸಭೆ ಅಧ್ಯಕ್ಷೆ ಅಕ್ಕಮಹಾದೇವಿ ಕಟ್ಟಿಮನಿ ಅವರು ಪ್ರಾರಂಭಗೊಳಿಸಿದರಲ್ಲದೇ ನಿರ್ವಹಣೆಗೆ ಸಿಬ್ಬಂದಿ ನೇಮಿಸುವದರ ಜೊತೆಗೆ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಮಯದಲ್ಲಿ ಮಾತನಾಡಿದ ಅಧ್ಯಕ್ಷೆ ಕಟ್ಟಿಮನಿ ಅವರು ಪಟ್ಟಣದ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕೆಂಬ ಉದ್ದೇಶದೊಂದಿಗೆ ಈ ಘಟಕಗಳನ್ನು ಪ್ರಾರಂಬಿಸಲಾಗಿದೆ ಮುಂದಿನ ಹಂತದಲ್ಲಿ ಈ ಶುದ್ದ ಕುಡಿಯುವ ನೀರಿನ ಘಟಕಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಲಾಗಿದೆ ಪ್ರಾಯೋಗಿಕವಾಗಿ ಈಗ ಪಟ್ಟಣದ ಮೂರುಕಡೆಗಳಲ್ಲಿ ಘಟಕಗಳು ಕಾರ್ಯನಿರ್ವಹಿಸಲಿವೆ ಜನತೆಯ ಬೇಡಿಕೆಯಂತೆ ಹೆಚ್ಚಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗುವದೆಂದರು.
ಈ ಸಮಯದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭುಗೌಡ ಮದರಕಲ್ಲ, ಅಣ್ಣಾಜಿ ಜಗತಾಪ, ಮಲ್ಲಿಕಾಜರ್ುನ ಪಟ್ಟಣಶೆಟ್ಟಿ, ಮುಖ್ಯಾಧಿಕಾರಿ ಎ.ಬಿ.ಕಲಾಲ, ಎಸ್.ಎ.ಘತ್ತರಗಿ, ಮೊದಲಾದವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 