ರಾಮತೀರ್ಥ ನಗರದ ತ್ಯಾಜ್ಯ ವಸ್ತುಗಳ ವಿಲೇವಾರಿಗೆ ತುತರ್ು ಕ್ರಮ : ಶಾಸಕ ಬೆನಕೆ
ಲೋಕದರ್ಶನ ವರದಿ
ಬೆಳಗಾವಿ 26: ದಿ.26ರಂದು ಶಾಸಕ ಅನಿಲ ಬೆನಕೆರವರು ರಾಮತೀರ್ಥ ನಗರದ 10 ವರ್ಷಗಳಿಂದ ಸರಿಯಾಗಿ ತ್ಯಾಜ್ಯ ವಸ್ತುಗಳ ವಿಲೇವಾರಿಯಾಗದ ಕೆಲಸವನ್ನು ಪೂರ್ಣಗೊಳಿಸಲು ಬುಡಾ ಅಧಿಕಾರಿಗಳ ಜೊತೆ ಸಮನ್ವಯ ಚಚರ್ೆ ನಡೆಸಿ ತ್ಯಾಜ್ಯ ವಿಲೇವಾರಿ ಮಾಡುವ ಸಮಸ್ಯೆಯನ್ನು ಬಗೆಹರಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆರವರು ಮಾತನಾಡಿ ರಾಮತೀರ್ಥ ನಗರದ 10 ವರ್ಷಗಳ ಸಮಸ್ಯೆಯಾದ ತ್ಯಾಜ್ಯ ವಿಲೇವಾರಿಯನ್ನು ಬುಡಾ ಅಧಿಕಾರಿಗಳು 2 ದಿನಕೊಮ್ಮೆ ಕಸ ವಿಲೇವಾರಿ ಮಾಡಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ರಾಮತೀರ್ಥ ನಗರದ ರಹವಾಸಿಗಳು ಸಹ ಕಸವನ್ನು ಗಟಾರು ಹಾಗೂ ಇನ್ನಿತರೆ ಸ್ಥಳದಲ್ಲಿ ಎಸೆಯದೆ 2 ದಿನಕೊಮ್ಮೆ ಕಸವನ್ನು ಸಂಗ್ರಹಿಸಿ ಕಸವನ್ನು ಎತ್ತಲು ಮನೆ ಮನೆಗೆ ಬರುವ ವಾಹನದಲ್ಲಿ ಹಾಕಬೆಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಬುಡಾ ಅಭಿಯಂತರರಾದ ಹಿರೆಮಠರವರು ರಾಮತೀರ್ಥ ನಗರದ ತ್ಯಾಜ್ಯ ವಿಲೇವಾರಿಯನ್ನು ಕೈಗೊಳ್ಳಲು 2 ದಿನಕೊಮ್ಮೆ ಮನೆ ಮನೆಗೆ ಕಸವನ್ನು ಸಂಗ್ರಹಿಸಿ ರಾಮತೀರ್ಥ ನಗರವನ್ನು ಸುಂದರವಾಗಿಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ವಿಲಾಸ ಕೆರೂರ, ಎಸ್.ಎಸ್.ಕಿವಡಸನ್ನವರ, ಎಮ್.ಬಿ. ನಿರವಾನಿ, ರಾಜು ಪಾಟೀಲ, ವಿಜಯಕುಮಾರ ಹೊಸಟ್ಟಿ , ಬುಡಾ ಅಭಿಯಂತರರಾದ ಹಿರೇಮಠ ಹಾಗೂ ರಾಮತೀರ್ಥ ನಗರದ ರಹವಾಸಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 