ಅಮೇಥಿ ಕ್ಷೇತ್ರದ ಜನರಿಗೆ ರಾಹುಲ್ ಗಾಂಧಿ ದ್ರೋಹ ಎಸಗಿದ್ದಾರೆ: ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಲಕ್ನೋ, ಏ.4-ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಸ್ಪಧರ್ಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಇಂದು ನಾಮಪತ್ರ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಜನರಿಗೆ ಅಪಮಾನ ಮಾಡಿ ದ್ರೋಹ ಎಸಗಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಲಕ್ನೋದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ರಾಹುಲ್ಗಾಂಧಿಯವರ ಮೇಲೆ ನಂಬಿಕೆ ಇಟ್ಟು ಅಮೇಥಿ ಕ್ಷೇತ್ರದ ಜನರು ಚುನಾಯಿಸಿ ಲೋಕಸಭೆಗೆ ಕಳುಹಿಸುತ್ತಿದ್ದರು. ಆದರೆ ಈ ಬಾರಿ ಅಮೇಥಿ ಜೊತೆ ವೈನಾಡಿನಲ್ಲಿ ಸ್ಪಧರ್ಿಸುವ ಮೂಲಕ ರಾಹುಲ್ ತಮ್ಮ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದರು.
ಅಮೇಥಿಯಲ್ಲಿ ಗೆಲ್ಲುವುದು ಕಷ್ಟ ಎಂಬುದು ಮನವರಿಕೆಯಾಗಿರುವುದರಿಂದಲೇ ರಾಹುಲ್ ವೈನಾಡು ಲೋಕಸಭಾ ಕೇತ್ರವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅವರ ಗೆಲುವು ಕಷ್ಟ ಎಂಬುದು ಕಾಂಗ್ರೆಸ್ ನಾಯಕರಿಗೂ ಗೊತ್ತು ಎಂದು ಸ್ಮೃತಿ ವಾಗ್ದಾಳಿ ನಡೆಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 