ಅಮೇಥಿ ಕ್ಷೇತ್ರದ ಜನರಿಗೆ ರಾಹುಲ್ ಗಾಂಧಿ ದ್ರೋಹ ಎಸಗಿದ್ದಾರೆ: ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಲಕ್ನೋ, ಏ.4-ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಸ್ಪಧರ್ಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಇಂದು ನಾಮಪತ್ರ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಜನರಿಗೆ ಅಪಮಾನ ಮಾಡಿ ದ್ರೋಹ ಎಸಗಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಲಕ್ನೋದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ರಾಹುಲ್ಗಾಂಧಿಯವರ ಮೇಲೆ ನಂಬಿಕೆ ಇಟ್ಟು ಅಮೇಥಿ ಕ್ಷೇತ್ರದ ಜನರು ಚುನಾಯಿಸಿ ಲೋಕಸಭೆಗೆ ಕಳುಹಿಸುತ್ತಿದ್ದರು. ಆದರೆ ಈ ಬಾರಿ ಅಮೇಥಿ ಜೊತೆ ವೈನಾಡಿನಲ್ಲಿ ಸ್ಪಧರ್ಿಸುವ ಮೂಲಕ ರಾಹುಲ್ ತಮ್ಮ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದರು.
ಅಮೇಥಿಯಲ್ಲಿ ಗೆಲ್ಲುವುದು ಕಷ್ಟ ಎಂಬುದು ಮನವರಿಕೆಯಾಗಿರುವುದರಿಂದಲೇ ರಾಹುಲ್ ವೈನಾಡು ಲೋಕಸಭಾ ಕೇತ್ರವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅವರ ಗೆಲುವು ಕಷ್ಟ ಎಂಬುದು ಕಾಂಗ್ರೆಸ್ ನಾಯಕರಿಗೂ ಗೊತ್ತು ಎಂದು ಸ್ಮೃತಿ ವಾಗ್ದಾಳಿ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 