ಯಲ್ಲಮ್ಮನಗುಡ್ಡಕ್ಕೆ ರಾಜೇಂದ್ರಕುಮಾರ ಕಟಾರಿಯಾ ಭೇಟಿ
Rajendra Kumar Kataria visits Yallammanagar
ಉಗರಗೋಳ, 16 : ಸಮೀಪದ ಯಲ್ಲಮ್ಮನಗುಡ್ಡಕ್ಕೆ ಕಂದಾಯ ಮತ್ತು ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ ಮಂಗಳವಾರ ಭೇಟಿ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸ್ಥಳ ಪರೀಶೀಲಿಸಿದರು.
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮಂತ್ರಾಲಯದ ಎಸ್ಎಎಸ್ಸಿಐ ಯೋಜನೆಯಡಿ 100 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಮಂತ್ರಾಲಯದ 2.0 ಯೋಜನೆಯಡಿ 18.37 ಕೋಟಿ ರೂಪಾಯಿ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ 97 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಸ್ಥಳಗಳನ್ನು ಹಾಗೂ ಮಾಹಿತಿ ಸಂಗ್ರಹಿಸಿದರು.
ದೇವಸ್ಥಾನ ಉಪಕಾರ್ಯಧರ್ಶಿ ನಾಗರತ್ನಾ ಚೋಳಿನ, ಕಿತ್ತೂರ ಪ್ರಾಧಿಕಾರದ ಕಾರ್ಯಧರ್ಶಿ ಪ್ರಭಾವತಿ ಪಕ್ಕಿರಪೂರ, ತಹಶೀಲ್ದಾರ ಮಲ್ಲಿಕಾರ್ಜುನ ಹೇಗ್ಗನ್ನವರ, ಸತ್ಯವತಿ ಮೇಡಂ, ಶೀತಲ ಕಡಟ್ಟಿ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಎಕನಗೌಡ ಮುದ್ದನಗೌಡ್ರ, ಪರಸನಗೌಡ ಕಾಳಿಂಗೌಡ್ರ, ಪಂಡಿತ ಯಡೂರಯ್ಯ, ಪಿ ರಾಜಶೇಖರಯ್ಯ, ಹಾಗೂ ತಾಲೂಕಿನ ಅಧಿಕಾರಿಗಳು ಮತ್ತು ದೇವಸ್ಥಾನ ಸಿಬ್ಬಂದಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 