ದೆಹಲಿಯ ಹೋಟೆಲ್ವೊಂದರಲ್ಲಿ ರಮೇಶ್ ಜಾರಕಿಹೊಳಿ ಪ್ರತ್ಯಕ್ಷ!
ಬೆಂಗಳೂರು,ಡಿ.29-ಸಚಿವ ಸ್ಥಾನದಿಂದ ಕೋಕ್ ನೀಡಿದ ಮೇಲೆ ಮುನಿಸಿಕೊಂಡು ಕಳೆದ ಐದು ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಕುಟುಂಬ ನವದೆಹಲಿಯ ಪ್ರತಿಷ್ಠಿತ ಹೋಟೆಲ್ವೊಂದರಲ್ಲಿ ಪ್ರತ್ಯಕ್ಷರಾಗಿದ್ದಾರೆ.
ನವದೆಹಲಿಯ ಪಂಚತಾರಾ ಹೋಟೆಲ್ವೊಂದರಲ್ಲಿ ಕುಟುಂಬ ಸಮೇತ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ರಮೇಶ್ ಜಾರಕಿಹೊಳಿ ಪುತ್ರ ಅಮರ್ನಾಥ್, ಅಳಿಯ ಅಂಬಿರಾವ್ ಪಾಟೀಲ್ ಸೇರಿದಂತೆ ಮತ್ತಿತರರು ದೆಹಲಿಯ ಹೋಟೆಲ್ನಲ್ಲಿ ಎರಡು ದಿನಗಳ ಹಿಂದೆಯೇ ವಾಸ್ತವ್ಯ ಹೂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟ್ಟಿದ್ದ ರಮೇಶ್ ತಮ್ಮ ತವರು ಜಿಲ್ಲೆ ಬೆಳಗಾವಿಯ ಗೋಕಾಕ್ನಲ್ಲಿ ಕಾಣಿಸಿಕೊಂಡ ನಂತರ ಅವರು ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿಯಾಗಿದ್ದರು, ಅವರ ಮುಂದಿನ ರಾಜಕೀಯ ನಡೆಗಳು ಏನು ಎಂಬುದರ ಬಗ್ಗೆ ಕುತೂಹಲ ಮೂಡಿಸಿತ್ತು.
ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಲು ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕರು ನಿರಂತರವಾಗಿ ಪ್ರಯತ್ನ ನಡೆಸಿದ್ದರೂ ಯಾರ ಕೈಗೂ ಸಿಕ್ಕಿರಲಿಲ್ಲ.
ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಗೌಪ್ಯ ಸ್ಥಳಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ದೆಹಲಿಗೆ ತೆರಳಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿತ್ತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 