ವಿಕಲಚೇತನ ಪ್ರವಾಸಿಗರ ಹಿತದೃಷ್ಟಿಯಿಂದ ಬ್ಯಾಟರಿಚಾಲಿತ ವಾಹನಗಳಿಗೆ ರ್ಯಾಂಪ್ ಅಳವಡಿಕೆ
Ramp installation for battery-powered vehicles for the benefit of disabled tourists
ವಿಜಯನಗರ (ಹೊಸಪೇಟೆ) 19: "ವಿಶ್ವ ಪರಂಪರೆ ಹಂಪಿ"ಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ್ಯಾಂಪ್ (ಖಚಿಟಠಿ) ಅಳವಡಿಸಲಾಗಿದೆ.
ವಿಶೇಷಚೇತನರು ತಮ್ಮ ವೀಲ್ ಚೇರ್ ಗಳನ್ನು ಬಳಸಿ ಬ್ಯಾಟರಿಚಾಲಿತ ವಾಹನದಲ್ಲಿ ಕೂಡಲು ಅನುಕೂಲವಾಗಲಿದ್ದು. ಆ ಮೂಲಕ ಪ್ರವಾಸಿ ತಾಣವಾದ ವಿಜಯ ವಿಠಲ ದೇವಸ್ಥಾನ ಕಲಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಂ ಷಾ ತಿಳಿಸಿದರು.
ಹಂಪಿಯಲ್ಲಿ ವಿಶೇಷಚೇತನರಿಗೆ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ, ತಾಲೂಕು ಪಂಚಾಯತಿಯ ಇಒ ಅವರಿಗೆ 2018-2019 ನೇ ಆದಿಭಾರ ಶುಲ್ಕ ಯೋಜನೆಯ ಉಳಿಕೆ ಅನುದಾನದಲ್ಲಿ ರ್ಯಾಂಪ್ ಅಳವಡಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ 20 ವಾಹನಗಳ ಪೈಕಿ 6 ಬ್ಯಾಟರಿಚಾಲಿತ ವಾಹನಗಳಿಗೆ ಅಳವಡಿಸಲಾಗಿದ್ದು, ವಿಶೇಷಚೇತನರಿಗೆ ತುಂಬಾ ಉಪಯುಕ್ತವಾಗಲಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಓ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ವಿಶೇಷಚೇತನರಿಂದ ಭರಪೂರ ಮೆಚ್ಚಗೆ ವ್ಯಕ್ತವಾಗುತ್ತಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 