ರಾಣಿ ಅಬ್ಬಕ್ಕ ಬಗ್ಗೆ ಇತಿಹಾಸದಲ್ಲಿ ಸರಿಯಾದ ಸ್ಥಾನ ದೊರೆಕಿಲ್ಲ: ಡಾ.ಅಜಿತ
Rani Abbakka has not been given a proper place in history: Dr. Ajith
ರಾಣಿ ಅಬ್ಬಕ್ಕ ಬಗ್ಗೆ ಇತಿಹಾಸದಲ್ಲಿ ಸರಿಯಾದ ಸ್ಥಾನ ದೊರೆಕಿಲ್ಲ: ಡಾ.ಅಜಿತ
ಧಾರವಾಡ 27: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ 78ನೇ ಜನ್ಮ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಣಿ ಅಬ್ಬಕ್ಕ ಮತ್ತು ರಾಣಿ ಚನ್ನಮ್ಮಳ ಕುರಿತು ಕೊಲ್ಯಾಜ್ ಚಟುವಟಿಕೆಯನ್ನು ನಡೆಸಲಾಯಿತು. ಡಾ. ಅಜಿತ ಪ್ರಸಾದ ಅವರು ಕಾರ್ಯಕ್ರಮ ಉದ್ಘಾಟಿಸಿ ರಾಣಿ ಅಬ್ಬಕ್ಕಳ 500 ನೇ ವರ್ಷದ ಜಯಂತಿ ಆಚರಿಸುತ್ತಿರುವ ವರ್ಷ ಅವಳ ಬಗ್ಗೆ ಇತಿಹಾಸದಲ್ಲಿ ಸರಿಯಾದ ಸ್ಥಾನ ದೊರಕಿಲ್ಲ ಎಂದರು. ಭಾರತದ ನೆಲದಲ್ಲಿ ಪೋರ್ಚುಗಿಸರ ವಿರುದ್ಧ ಹೋರಾಡಿದ ವೀರಮಹಿಳೆಯ ಇತಿಹಾಸದಲ್ಲಿ ಅಜ್ಞಾತವಾಗಿ ಉಳಿದುಕೊಂಡಿದ್ದಾಳೆ.
ಅದೇ ರೀತಿ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ನೇ ವರ್ಷ ಆಚರಿಸುತ್ತಿರುವ ರಾಣಿ ಚೆನ್ನಮ್ಮಳ ಶೌರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆಯಾದ ರಾಣಿ ಚೆನ್ನಮ್ಮ ಇತಿಹಾಸದಲ್ಲಿ ಮುಂಜಾನೆ ಚಿಕ್ಕಿ ಎಂದು ಕರೆದಿದ್ದಾರೆ. ಇದರ ಜೊತೆ ಡಾ.ವೀರೇಂದ್ರ ಹೆಗ್ಗಡೆ ಅವರ ಸಾಮಾಜಿಕ ಮತ್ತು ಶೈಕ್ಷಣಿಕ, ಮಹಿಳಾ ಸಬಲೀಕರಣ, ದೇವಾಲಯಗಳ ಜೀರ್ಣೋದ್ಧಾರ, ಪರಂಪರೆಗಳ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಕೈಗೊಂಡು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ.ಆರ್.ವಿ.ಚಿಟಗುಪ್ಪಿ, ಮುರಳೀಧರ ಹೆಗಡೆ, ವಿದ್ಯಾರ್ಥಿ ಪ್ರತಿನಿಧಿಗಳಾದ ಭಾರ್ಗವಿ ರತ್ನಾಕರ ಮತ್ತು ಕು. ಚಾರುಲತಾ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 