ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚನ್ನಮ್ಮ ನಾಮಕರಣಕ್ಕೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ : ಬ್ರಿಟಿಷರ ವಿರುದ್ಧ ಸಮರ ಸಾರಿ ಹೋರಾಟ ಮಾಡಿದ ದೇಶದ ಮೊದಲ ವೀರಮಹಿಳೆ ರಾಣಿ ಕಿತ್ತೂರು ಚನ್ನಮ್ಮರನ್ನು ಸಕರ್ಾರ ರಾಷ್ಟ್ರ ಮಾತೆ ವೀರರಾಣಿ ಕಿತ್ತೂರು ಚನ್ನಮ್ಮ ಎಂದು ನಾಮಕರಣ ಮಾಡುವಂತೆ ಪಂಚಮಸಾಲಿ ಸಮಾಜದ ಕೂಡಲ ಸಂಗಮ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಸಕರ್ಾರಗಳನ್ನು ಒತ್ತಾಯಿಸಿದ್ದಾರೆ.
ತಾಲೂಕಿನ ವಿನೋಬನಗರದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮರ 195ನೇ ವಿಜಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಈಚೆಗೆ ಮಾತನಾಡಿದ ಅವರು ಶರಣರು,ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಮಾಡುವುದು ಸರಿಯಲ್ಲ. ಗ್ರಾಮಸ್ಥರು ವಿಜಯೋತ್ಸವ ಆಚರಿಸಿರುವದು ಶ್ಲಾಘನೀಯ ಎಂದರು.ಪೀಠದಿಂದ ನಿರಂತವಾಗಿ ಸಮಾಜದ ಒಳಿತಿಗಾಗಿ ಉದ್ಯೋಗ,ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಹೋರಾಟ ನಡೆಸುವುದು ಅಗತ್ಯವಿದೆ ಎಂದರು.ಇದಕ್ಕೂ ಮುನ್ನ ಕಿತ್ತೂರು ಚನ್ನಮ್ಮ ಭಾವಚಿತ್ರದ ಮೆರವಣಿಗೆ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಚಾಲನೆ ನೀಡಿದರು. ಪಂಚಮಸಾಲಿ ನೌಕರರ ಸಂಘದ ರಾಜ್ಯ ಕಾರ್ಯದಶರ್ಿ ರವಿಉತ್ತಂಗಿ, ಶಿಕ್ಷಕ ಯು.ಹಾಲೇಶ, ಬಸವನಗೌಡ ಪಾಟೀಲ ಮಾತನಾಡಿದರು. ತಾ.ಪಂ.ಮಾಜಿ ಅಧ್ಯಕ್ಷ ಸೋಗಿಹಾಲೇಶ, ರಾಣಿ ಚನ್ನಮ್ಮ ಬ್ಯಾಂಕ್ ಉಪಾಧ್ಯಕ್ಷ ಕೆ.ಪತ್ರೇಶ, ಗ್ರಾಮದ ಮುಖಂಡರಾದ ಕೊಟ್ರೇಶಪ್ಪ, ಶಿವಕುಮಾರಗೌಡ, ಟಿ.ಹನುಮಂತಪ್ಪ, ಹಣ್ಣಿ ಬಸವನಗೌಡ, ಮಹ್ಮದ್ರಫಿ ಇತರರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 