ಅಥಣಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಮನವಿ
ಲೋಕದರ್ಶನ ವರದಿ
ಅಥಣಿ 19: ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ತಿಂಗಳುಗಳೇ ಗತಿಸಿದರೂ, ರಾಜಕೀಯ ಡೊಂಬರಾಟದಲ್ಲಿ ತೊಡಗಿರುವ ನಾಯಕರು ಬರಪರಿಹಾರ ಕಾಮಗಾರಿಗಳ ಬಗ್ಗೆ ಕಿಂಚಿತ್ತು ಲಕ್ಷ ವಹಿಸದೇ ಇರುವುದು ದುರದೃಷ್ಟಕರ ಸಂಗತಿ ಎಂದು ಕರವೇ ಅಧ್ಯಕ್ಷ ಬಸನಗೌಡ ಪಾಟೀಲ (ಬಮ್ನಾಳ) ಆಕ್ರೋಶ ವ್ಯಕ್ತ ಪಡಿಸಿದರು.
ಅವರು ಸ್ಥಳೀಯ ತಹಶೀಲ್ದಾರ ಎಮ್.ಎನ್. ಬಳಿಗಾರರಿಗೆ ಮನವಿ ಸಲ್ಲಿಸಿ ಪತ್ರಿಕೆಯೊಂದಿಗೆ ಮಾತನಾಡುತ್ತ, ಬರಗಾಲ ಪೀಡಿತ ಪ್ರದೇಶವೆಂಬ ಹಣೆಪಟ್ಟೆ ಕಟ್ಟಿಕೊಂಡಿರುವ ತಾಲೂಕಿನ ಪೂರ್ವ ಮತ್ತು ಉತ್ತರ ಭಾಗದ ಬಹುತೇಕ ಹಳ್ಳಿಗಳಲ್ಲಿ ದನ, ಕರುಗಳಿಗೆ ಕುಡಿಯಲು ನೀರಿಲ್ಲ, ಮೇವಿಲ್ಲ ಹೀಗಾಗಿ ಅವುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ, ಕೂಡಲೇ ತಾಲೂಕಾಡಳಿತ ಮತ್ತು ಜಿಲ್ಲಾಡಳಿತ ಕ್ರಮ ಜರುಗಿಸದೇ ಇದ್ದಲ್ಲಿ ಕರವೇ ಉಗ್ರವಾಗಿ ಪ್ರತಿಭಟಿಸುವುದೆಂದು ಎಚ್ಚರಿಕೆ ಕೂಡ ನೀಡಿದರು.
ಅಗತ್ಯವಿದ್ದಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಿ, ಮಹಾರಾಷ್ಟ್ರಕ್ಕೆ ಗುಳೆ ಹೊರಟ ಗಡಿಭಾಗದ ಜನರಿಗೆ ಸೂಕ್ತ ಉದ್ಯೋಗಾವಗಾಶ ಕಲ್ಪಿಸುವಂತೆಯೂ ಕೂಡ ಒತ್ತಾಯಿಸಿದರು. ಒಂದು ವೇಳೆ ಈಗಲೂ ಕೂಡ ಅಧಿಕಾರಿಗಳು ಮತ್ತು ಸಕರ್ಾರ ನಮ್ಮ ಕರೆಗೆ ಸ್ಪಂಧಿಸದಿದ್ದಲ್ಲಿ ರಾಜ್ಯಪಾಲರ ಮೊರೆ ಹೋಗುವುದು ಅನಿವಾರ್ಯವಾಗುತ್ತದೆ ಎಂದೂ ಕೂಡ ಹೇಳಿದರು.
ಈಗಾಗಲೇ ಎರಡು ಬಾರಿ ಸಾಂಗಲಿ ಜಿಲ್ಲಾಧಿಕಾರಿಗಳಿಗೆ ಮೈಶಾಳ - ತಾಕಾರಿ ಕಾಲುವೆಯ ಮುಖಾಂತರ ಈ ಭಾಗದಲ್ಲಿ ನೀರು ಹರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಗಿದ್ದು, ಮತ್ತೊಮ್ಮೆ ಮಾನವಿಯತೆ ದೃಷ್ಟಿಯಿಂದ ಈ ಭಾಗದ ಸಮಸ್ಯೆಯನ್ನು ಅವರಿಗೆ ತಲುಪಿಸಿ ಕುಡಿಯಲು ನೀರು ಬಿಡುವಂತೆ ಪ್ರಯತ್ನಿಸುವುದಾಗಿ ಹೇಳಿದರು.
ಈ ವೇಳೆ ಸಿ.ಪಿ.ಐ ಎಚ್. ಶೇಖರಪ್ಪ, ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ರವಿ ಬಂಗಾರೆಪ್ಪನವರ, ಪಿ.ಎಸ್.ಐ ಅವಟಿ, ಕರವೇ ಕಾರ್ಯಕರ್ತರಾದ ಸುಂದರ ಸೌದಾಗರ, ಮಂಜು ಹೋಳಿಕಟ್ಟಿ, ಜಿಲ್ಲಾ ಸಂಚಾಲಕ ಅನೀಲ ಸೌದಾಗರ, ಸಚಿನ ಪಾಟೀಲ, ಅಪ್ಪು ಪಾಟೀಲ, ಓಂಕಾರ ಇಂಗೋಲೆ ಸೇರಿದಂತೆ ಅನೇಕರು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 