ರಸ್ತೆಗಳ ಕಾಂಕ್ರೀಟ್ ಮಾಡಲು ಮನವಿ
ಲೋಕದರ್ಶನ ವರದಿ
ಕಾರವಾರ 05: ನಗರದ ಕೆಎಚ್ಬಿ ಹೊಸ ಬಡಾವಣೆಯ ಒಳಭಾಗದ ರಸ್ತೆಗಳನ್ನು ಕೂಡ ಕಾಂಕ್ರೀಟ್ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಶಾಸಕಿ ರೂಪಾಲಿ ನಾಯ್ಕ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ಸಮೀಪದವರೆಗಿನ ರಸ್ತೆ (ಎ 16) ಹಾಗೂ ನೀರಿನ ಟ್ಯಾಂಕ್ವರೆಗಿನ ರಸ್ತೆ (ಎ 23) ಕಾಮಗಾರಿ ಮಾಡಲಾಗಿದೆ. ಅಲ್ಲಿಂದ ಮುಂದುವರಿಸುವ ಬಗ್ಗೆ ನಗರಸಭೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಇಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಂಚರಿಸಲು ಕಷ್ಟವಾಗಲಿದೆ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ರೂಪಾಲಿ ನಾಯ್ಕ ಬಡಾವಣೆಯ ಸಮಸ್ಯೆ ಗಮನಕ್ಕೆ ಬಂದಿದೆ. ಮಳೆಗಾಲಕ್ಕೂ ಮೊದಲೇ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಜಾನನ, ಸ್ಥಳೀಯರಾದ ರಾಜೇಶ್ ನಾಯ್ಕ, ಮಂಗೇಶ ಆರ್.ಭಟ್, ಪ್ರಶಾಂತ ನಾಯ್ಕ, ಜಂಬೋ ಮೇಸ್ತ, ನಾರಾಯಣ ಆಚಾರಿ, ಸುರೇಶ ಗಾಂವಕರ, ಪರಶುರಾಮ ನಾಯ್ಕ, ಬಾಲರಾಜ ನಾಡರ, ಹೈದರ್ ಶರೀಫ್, ಮಂಜ ಶೇಟ್ ಮೊದಲಾದವರು ಇದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 