ಹೊಸ ವರ್ಷಾಚರಣೆ ಸಂಭ್ರಮಕ್ಕೆ ರೆಸಾರ್ಟ್ಗಳು ರಂಗು ರಂಗಾಗಿ ಸಿದ್ಧ
Resorts are all set for New Year celebrations
ಕೊಪ್ಪಳ 30: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಯುವ ಸಮೂಹ ಸೇರಿದಂತೆ ಜನತೆ ಸಿದ್ಧರಾಗಿದ್ದು, ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನಲ್ಲಿರುವ ಬಹುತೇಕ ಎಲ್ಲಾ ರೆಸಾರ್ಟ್ಗಳು ರಂಗು ರಂಗಾಗಿ ಸಿದ್ಧಗೊಂಡಿವೆ. ಹೊಸ ವರ್ಷವನ್ನು ರೆಸಾರ್ಟ್ಗಳಲ್ಲಿ ತಂಗಿ ಸ್ವಾಗತಿಸಲು ಅನೇಕರು ಆಗಮಿಸಿದ್ದಾರೆ.
ಎರಡೂ ತಾಲೂಕಿನಲ್ಲಿರು ಎಲ್ಲಾ ರೆಸಾರ್ಟ್ಗಳಲ್ಲಿ ದಾಂಡೇಲಿ, ಗೋವಾ ಮತ್ತು ಗೋಕರ್ಣ ಮಾದರಿಯಲ್ಲಿ ನೈಟ್ಪಾರ್ಟಿ, ಫೈರ್ ಕ್ಯಾಂಪ್, ಹಾಡು, ನೃತ್ಯಕ್ಕಾಗಿ ಸರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ವಿದೇಶಿ ಮತ್ತು ಸ್ವದೇಶಿ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್ ಮಾಲೀಕರು ಮುಂದಾಗಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ, ರಾಜಾರಾಮ ಪೇಟೆ, ಗಂಗಾವತಿ ತಾಲೂಕಿನ ಸಣಾಪುರ, ಹನುಮನಹಳ್ಳಿ, ಜಂಗ್ಲಿ, ಆನೆಗೊಂದಿ ಸೇರಿ ವಿವಿಧ ಗ್ರಾಮದಲ್ಲಿನ ಪ್ರಕೃತಿ ಮಡಿಲಿಲ್ಲಿ ಸಾಲು- ಸಾಲು ರೆಸಾರ್ಟ್ಗಳು ತಲೆ ಎತ್ತಿವೆ.
ಭಾರಿ ಬೆಟ್ಟಗುಡ್ಡಗಳ ಸಾಲಿನಲ್ಲಿ ಪ್ರಶಾಂತವಾದ ತುಂಗಭದ್ರಾ ನದಿ ತೀರದಲ್ಲಿ ಪಾರ್ಟಿ ಆಯೋಜನೆಗೆ ಸಿದ್ಧತೆ ಭರದಿಂದ ಸಾಗಿದೆ. ಪ್ರಕೃತಿ ನಡುವೆ ಹೊಸ ವರ್ಷ ಸ್ವಾಗತಿಸಲು ನೆರೆಯ ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಹಾಗೂ ಕೇರಳ ಸೇರಿ ಹೊರ ರಾಜ್ಯ ಹಾಗೂ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ರೆಸಾರ್ಟ್ ಮಾಲೀಕರು ಹೊಸ ವರ್ಷದ ಸಂಭ್ರಮಾಚರಣೆ ನೆಪದಲ್ಲಿ ಕಾನೂನು ಬಾಹಿರ ಮದ್ಯ ಮಾರಾಟ ಹಾಗೂ ನಶೆ ಏರಿಸುವ ನೈಟ್ ಪಾರ್ಟಿ ಆಯೋಜನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಐತಿಹಾಸಿಕ ಹಂಪಿ ಬಳಿಯ ವಿರೂಪಾಪುರ ಗಡ್ಡಿಯಲ್ಲಿನ ರೆಸಾರ್ಟ್ಗಳ ತೆರವಿನ ನಂತರ ಉದ್ಯಮ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ಕೃಷಿ ಭೂಮಿಗೆ ಶಿಫ್ಟ್ ಆಗಿದೆ. ಕೃಷಿ ಭೂಮಿಯಲ್ಲಿ 150ಕ್ಕೂ ಹೆಚ್ಚು ರೆಸಾರ್ಟ್ಗಳು ತಲೆ ಎತ್ತಿವೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲೇ ಎಲ್ಲ ರೂಂ ಬುಕ್ ಮಾಡಿಕೊಂಡಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಇಲ್ಲದ ಕಡೆಯೂ ಕಿಕ್ ಹೊಡೆಸುವ ತಯಾರಿ ಶುರು ಆಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 