ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ
Road improvement works launched
ರಾಯಬಾಗ 28 : ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳ ತೋಟದ ರಸ್ತೆಗಳನ್ನು ಸುಧಾರಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶನಿವಾರ ತಾಲೂಕಿನ ಮೇಖಳಿ ಗ್ರಾಮದಲ್ಲಿ ಜಿ.ಪಂ.ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ ಮೇಖಳಿ ಮುಖ್ಯ ರಸ್ತೆಯಿಂದ ಜಾನ್ವೇಕರ್ ತೋಟದ ರಸ್ತೆ ಸುಧಾರಣೆ ಹಾಗೂ 20 ಲಕ್ಷ ರೂ.ಅನುದಾನದಲ್ಲಿ ಮೇಖಳಿ-ನಾಗರಮುನ್ನೋಳ್ಳಿ ರಸ್ತೆಯಿಂದ ಮುತಾರೆ ತೋಟದ ಸರ್ಕಾರಿ ಶಾಲೆವರೆಗೆ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತೋಟದ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಹೋಗುವ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ. ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಸೂಚಿಸಿದರು. ಜೆಇ ರಾಕೇಶ ಕಟ್ಟೀಮನಿ, ಸದಾಶಿವ ಫೋರೆ್ಡ, ಸಂಗಣ್ಣ ದತ್ತವಾಡೆ, ಪಿ.ಎ.ನಾಯಿಕ, ಕುಮಾರ ಮರಭೀಮಗೋಳ, ಸಾತಪ್ಪ ಮುತಾರೆ, ಬೀರು ನಾಯಿಕ, ಭೀಮಶಿ ಸುತಾರ, ಮಹೇಶ ಮುತಾರೆ, ಭೀಮಸೇನ ಮುತಾರೆ, ರಾಜು ನಾಯಿಕ, ಮಂಜು ಮುತಾರೆ ಸೇರಿ ಅನೇಕರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 