ದಾಖಲೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಗಿಸುತ್ತಿದ್ದ 11,05,200 ರೂ. ಹಣ ವಶಕ್ಕೆ
ಬಳ್ಳಾರಿ27: ದಾಖಲೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಹಣ ಸಾಗಿಸುತ್ತಿದ್ದ 11,05,200 ರೂ.ಗಳನ್ನು (ಹನ್ನೊಂದು ಲಕ್ಷ ಐದು ಸಾವಿರ ಎರಡುನೂರು ರೂ.ಗಳು) ಶುಕ್ರವಾರ ರಾತ್ರಿ ವಶಪಡಿಸಿಕೊಳ್ಳಲಾಗಿದೆ.
ಮರಿಯಮ್ಮನಳ್ಳಿಯ ಜಿಟಿಟಿಸಿ ಬಳಿ ಸ್ಥಾಪಿಸಲಾಗಿರುವ ಸ್ಥಿರ ಕಣ್ಗಾವಲು ಪಡೆ(ಎಸ್ಎಸ್ಟಿ) ಚೆಕ್ ಪೋಸ್ಟ್ ಬಳಿ ದಾವಣಗೆರೆಯಿಂದ ಸೋಲಾಪುರಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ವಾಹನವಾದ (ಕೆಎ-17,ಎಫ್-1673) ನಲ್ಲಿ ಸ್ಥಿರ ಕಣ್ಗಾವಲು ಪಡೆಯ ಸಿಬ್ಬಂದಿ ಪರಿಶೀಲಿಸುವ ಸಂದರ್ಭದಲ್ಲಿ ಈ ಹಣ ಪತ್ತೆಯಾಗಿದ್ದು, ಈ ಕುರಿತು ವಿಚಾರಿಸಲಾಗಿ ಸಮಂಜಸವಾದ ದಾಖಲೆ ನೀಡದ ಪ್ರಯುಕ್ತ ವಶಪಡಿಸಿಕೊಂಡು ಹಗರಿಬೊಮ್ಮನಹಳ್ಳಿ ಖಜಾನೆಯಲ್ಲಿಡಲಾಗಿದೆ.
ಈ ಹಣವು ಜೂಟುರು ಹನುಮೇಶ ಕುವೆಂಪು ಬಡಾವಣೆ ಗಂಗಾವತಿ (ಶ್ರೀ ರಾಮಾಂಜನೇಯ ಕಮಷರ್ಿಯಲ್ ಕಾಪರ್ೊರೇಷನ್ ಸಿ.ಬಿ.ಎಸ್ ಗಂಜ್ ಆರ್.ಜಿ ರಸ್ತೆ ಅಂಗಡಿ ಮಾಲೀಕ) ಎಂಬುವವರಿಗೆ ಸೇರಿದ್ದಾಗಿದೆ.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಜಹೀರ್ ಅಬ್ಬಾಸ್, ತಾಲೂಕು ನೋಡಲ್ ಅಧಿಕಾರಿ ರಾಜಪ್ಪ, ತಹಸೀಲ್ದಾರ್ ರೆಹಮಾನ್ಪಾಶಾ, ಎಂಸಿಸಿ ನೋಡಲ್ ಅಧಿಕಾರಿ ವಿಶ್ವನಾಥ ಮತ್ತು ಈಖಣ &ಖಖಖಿ ಸಿಬ್ಬಂದಿ ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 