ವಿದ್ಯಾಥರ್ಿಗಳಿಗೆ ಗ್ರಾಮೀಣ ಜೀವನ ದರ್ಶನ
ಲೋಕದರ್ಶನ ವರದಿ
ಶಿಗ್ಗಾವಿ04: ಇಂದಿನ ಮಕ್ಕಳಿಗೆ ಗ್ರಾಮೀಣ ಬದುಕಿನ ಪರಿಚಯ ಮಾಡಿಸಬೇಕಾದರೆ ಒಮ್ಮೆ ' ಉತ್ಸವ ರಾಕ್ ಗಾರ್ಡನ್ಗೆ ಭೇಟಿ ನೀಡಬೇಕು ಎಂದು ಚಿಕ್ಕೋಡಿ ಸರಕಾರಿ ಉದರ್ು ಮಾಡಲ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೈ.ಎಂ.ಪಟೇಲ್ ಹೇಳಿದರು.
ಶೈಕ್ಷಣಿಕ ಪ್ರವಾಸದನ್ವಯ ತಮ್ಮ ಶಾಲಾ ವಿದ್ಯಾಥರ್ಿಗಳು ಹಾಗೂ ಸಹ ಶಿಕ್ಷಕರೊಂದಿಗೆ ಗೊಟಗೋಡಿಯ ರಾಕ್ ಗಾರ್ಡನ್ ಹಾಗೂ ಇಂಡಿಯನ್ ಗಾರ್ಡನ್ಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.
ಇಲ್ಲಿನ ಸಹಸ್ರಾರು ಶಿಲ್ಪಗಳು ವಿದ್ಯಾಥರ್ಿಗಳನ್ನು ರೋಮಾಂಚನಗೊಳಿಸಿದವು.
ಅಲ್ಲದೇ ಗ್ರಾಮೀಣ ಸಾಮ್ರಾಜ್ಯದ ನೈಜ ದೃಶ್ಯಗಳ ಬಗ್ಗೆ ತಮ್ಮೊಂದಿಗಿದ್ದ ಶಿಕ್ಷಕರಿಂದ ಅಗತ್ಯ ಮಾಹಿತಿ ಪಡೆದುಕೊಳ್ಳುವಂತೆ ಮಾಡಿದವು. ಇದು ಅಕ್ಷರಶ: ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ಕೇಂದ್ರ ಎಂದು ಅಭಿಪ್ರಾಯಪಟ್ಟರು.
ರಾಕ್ ಗಾರ್ಡನ್ನ ಅನುಭವ ಸ್ಮರಣೀಯವಾದುದು ಎಂದ ದೈಹಿಕ ಶಿಕ್ಷಕ ಎ.ಎ.ಶೇಖ್, ಇಂಡಿಯನ್ ಗಾರ್ಡನ್ನ ಸಾಹಸಮಯ ಆಟಗಳು, ಮಳೆ ಸ್ನಾನ, ಎತ್ತಿನ ಗಾಡಿ-ಟಾಂಗಾ ಸವಾರಿ, ದೋಣಿ ವಿಹಾರ ಹಾಗೂ ನೀರಿನ ಆಟಗಳು ಮಕ್ಕಳನ್ನು ಭರಪುರ ರಂಜಿಸಿದವು ಎಂದು ವಿವರಿಸಿದರು. ಶಿಲ್ಪಗಳ ರೂಪದಲ್ಲಿರುವ ಗ್ಯಾಲರಿಗಳನ್ನು ನೋಡಿದ ವಿದ್ಯಾಥರ್ಿಗಳು, ಒಂದು ಕ್ಷಣ ಹೌಹಾರಿದರಲ್ಲದೆ, ಅವುಗಳನ್ನು ಮುಟ್ಟಿ ನೋಡುವ ಇಂಗಿತ ವ್ಯಕ್ತಪಡಿಸಿದರು ಎಂದು ಸಹ ಶಿಕ್ಷಕರು ಹೇಳಿದರು.
ಇಲ್ಲಿ ಗಾಂಧೀಜಿಯವರ ಸುಭೀಕ್ಷ ಗ್ರಾಮೀಣ ಸಾಮ್ರಾಜ್ಯದ ಕನಸು ನನಸಾಗಿದೆ ಎನ್ನುವಷ್ಟರ ಮಟ್ಟಿಗೆ ಶಿಲ್ಪಗಳು ನೈಜತೆ ಹೊಂದಿವೆ ಎಂದು ವಿದ್ಯಾಥರ್ಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 