ಶ್ರದ್ದೆ ಭಕ್ತಿಗಳಿಂದ ನಾರಾಯಣನನ್ನು ಆರಾಧಿಸಿ ಉಪವಾಸ ಆಚರಿಸಿದಲ್ಲಿ ಮೋಕ್ಷ
Salvation if you worship Narayana with devotion and fast
ಶ್ರದ್ದೆ ಭಕ್ತಿಗಳಿಂದ ನಾರಾಯಣನನ್ನು ಆರಾಧಿಸಿ ಉಪವಾಸ ಆಚರಿಸಿದಲ್ಲಿ ಮೋಕ್ಷ
ಕಂಪ್ಲಿ 10: ಪಟ್ಟಣದ ಸತ್ಯನಾರಾಯಣ ಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಜರುಗಿತು. ಇಲ್ಲಿನ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿಶ್ರೀಗಳು ಮಾತನಾಡಿ, ಪ್ರತಿವರ್ಷದ ಆಷಾಢ ಶುದ್ಧ ಏಕಾದಶಿ, ಕಾರ್ತೀಕ ಶುದ್ಧ ಏಕಾದಶಿ, ಪುಷ್ಯ ಶುದ್ಧ ಏಕಾದಶಿಗಳು ಅತ್ಯಂತ ಪವಿತ್ರವಾಗಿವೆ. ಪ್ರತಿವರ್ಷದ ಆಷಾಢ ಶುದ್ಧ ವೈಕುಂಠ ಏಕಾದಶಿಯಂದು ಉತ್ತರದ್ವಾರದಿಂದ ಶ್ರೀಮನ್ನಾರಾಯಣನ ದರ್ಶನ ಮಾಡಿದಲ್ಲಿ ಮೋಕ್ಷ ಪ್ರಾಪ್ತಿಯಾಗುತ್ತದೆ. ವೈಕುಂಠ ಏಕಾದಶಿಯಂದು ವೈಕುಂಠದ ಬಾಗಿಲು ತೆರೆದಿದ್ದು, ದೇವತೆಗಳು ನಾರಾಯಣನ ದರ್ಶನ ಪಡೆಯುತ್ತಾರೆಂಬುದು ಪುರಾಣ ಪ್ರತೀತಿಯಿದ್ದು, ಅನನ್ಯ ಶ್ರದ್ದೆ ಭಕ್ತಿಗಳಿಂದ ನಾರಾಯಣನನ್ನು ಆರಾಧಿಸಿ ಉಪವಾಸ ಆಚರಿಸಿದಲ್ಲಿ ಮೋಕ್ಷ ಸಾಧನೆಯಾಗುತ್ತದೆ ಎಂದು ಹೇಳಿದರು. ವೈಕುಂಠ ಏಕಾದಶಿ ನಿಮಿತ್ತ ಶ್ರೀಮನ್ನಾರಾಯಣ ಪ್ರತಿಮೆಯನ್ನು ಫಲಪುಷ್ಪಾಧಿಗಳಿಂದ ಅಲಂಕರಿಸಲಾಗಿತ್ತು. ಪಂಚಾಮೃತಸಹಿತ ಅಷ್ಟೋತ್ತರ ಸಹಸ್ರನಾಮ, ಶ್ರೀಸೂಕ್ತ, ಪುರುಷ ಸೂಕ್ತ ಸೇರಿ ಹೋಮಹವನಾದಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸೇವಾಧರ್ಮದರ್ಶಿಗಳಾದ ವೈಷ್ಣವಿ ಕೃಷ್ಣಮೂರ್ತಿ, ಲಲಿತಾರಾಣಿ ಗೀರೀಶ್, ರೂಪಾ ಗುರುಪ್ರಸಾದ್, ಸವಿತಾಶಶಿಧರ್, ಭಗವತಿ, ಆಶ್ವತ್ಥನಾರಾಯಣ, ಸಂಪತ್, ಜಯಂತಶ್ರೀ ವರ್ಷ, ವೆಂಕಟಪತಿ ನರಗುಂದ ಸೇರಿ ಸದ್ಭಕ್ತರು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 