ಸವಣೂರ ದುರಂತ ಶಾಸಕ ಪಠಾಣ ಸಂತಾಪ
Savanur tragedy MLA Pathan condoles
ಸವಣೂರ ದುರಂತ ಶಾಸಕ ಪಠಾಣ ಸಂತಾಪ
ಶಿಗ್ಗಾವಿ 23: ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ ಮತ್ತು ನಮಗೆ ಸಂಪೂರ್ಣ ಸಹಕಾರ ನೀಡಿದ ಯಲ್ಲಾಪೂರ ಶಾಸಕ ಶಿವರಾಂ ಹೆಬ್ಬಾರ್,ಉ.ಕ.ಜಿಲ್ಲಾಡಳಿತ ಪೋಲಿಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ಶಾಸಕ ಯಾಸೀರಖಾನ ಪಠಾಣ ತಿಳಿಸಿದರು. ಸವಣೂರಿನಿಂದ ಕುಮಟಾ ಮಾರುಕಟ್ಟೆಗೆ ವ್ಯಾಪಾರಕ್ಕೆಂದು ತರಕಾರಿ, ಹಣ್ಣು ಹಾಗೂ ದಿನಸಿ ಸಾಮಗ್ರಿಗಳನ್ನು ಹೊತ್ತೊಯ್ದ ಲಾರಿ ಯಲ್ಲಾಪೂರ ತಾಲೂಕಿನ ಗುಳ್ಳಾಪೂರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸವಣೂರಿನ 29 ಜನ ಲಾರಿ ಅಡಿಯಲ್ಲಿ ಸಿಲುಕಿ ಹತ್ತು ಜನ ಪ್ರಾಣ ತೆತ್ತಿದ್ದಾರೆ ಇನ್ನೂಳಿದ 19 ಜನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತ್ವರಿತವಾಗಿ ವಿಪತ್ತು ನಿರ್ವಹಣಾ ಅಡಿಯಲ್ಲಿ ಚೆಕ್ ಮೂಲಕ ಬಿಡುಗಡೆಗೊಳಿಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸರ್ಕಾರ ಸಂಪೂರ್ಣ ವೆಚ್ಚ ಭರಿಸಲು ಸಿದ್ದವಾಗಿದೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 