ದಾವಣಗೇರೆಯಲ್ಲಿ ಸವಿತಾ ಸಮಾಜದ ವಧು-ವರರ ಸಮಾವೇಶ
Savita Samaj bride and groom gathering in Davangere
ಗದಗ 08: ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗದ ಮುಂದಾಳತ್ವದಲ್ಲಿ ಸವಿತಾ ಸ್ವಯಂವರ ಮತ್ತು ಅಂತರರಾಜ್ಯ ಮಟ್ಟದ ಸವಿತಾ ಸಮಾಜದ ವಧು-ವರರ ಸಮಾವೇಶ-2026 ಕಾರ್ಯಕ್ರಮವು 25-01-2026 ಭಾನುವಾರ ಸಮಯ: ಬೆಳಿಗ್ಗೆ 10.00 ಗಂಟೆಗೆ ಸ್ಥಳ: ಚನ್ನಗಿರಿ ವಿರುಪಾಕ್ಷಪ್ಪನನರ ಕಲ್ಯಾಣ ಮಂಟಪ, ಗಡಿಯಾರ ಕಂಬದ ಹತ್ತಿರ, ದಾವಣಗೆರೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ಜಿಲ್ಲೆಯ ಸವಿತಾ ಸಮಾಜದ ಆಸಕ್ತ ವಧು-ವರರಿಗೆ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರರದ ಕೃಷ್ಣಾ ಎಚ್ ಹಡಪದ ಅವರು ಕರೆ ನೀಡಿದ್ದಾರೆ. ಅವರು ಪತ್ರಿಕಾ ಹೇಳಿಕೆಯಲ್ಲಿ, ಮಾತನಾಡಿ "ಜೀವನದಲ್ಲಿ ಒಮ್ಮೆ ಬರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು, ನಿಮ್ಮ ಭವಿಷ್ಯವನ್ನು ರೂಪಿಸಲು, ಮತ್ತು ನಿಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಈ ಸಮಾವೇಶ ಒಂದು ಉತ್ತಮ ಅವಕಾಶವಾಗಿದೆ
ಸಮಾಜದ ಯುವಕ-ಯುವತಿಯರು ಈ ಅವಕಾಶವನ್ನು ಬಳಸಿಕೊಂಡು, ತಮ್ಮ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು ಎಂದ ಅವರು ನಾವು ಗದಗ ಜಿಲ್ಲೆಯ ಎಲ್ಲಾ ಆಸಕ್ತ ವಧು-ವರರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ" ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಪ್ರಬಾಕ್ಸ್ ಹೇಳಿಕೆ ಗದಗ ಜಿಲ್ಲೆಯ ಎಲ್ಲಾ ಸವಿತಾ ಸಮಾಜದ ಆಸಕ್ತ ವಧು-ವರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಮತ್ತು ಸಂಘದ ಅಧ್ಯಕ್ಷರಾದ ಪ್ರೊಫೆಸರ್ ವೆಂಕಟಾಚಲಪತಿ ಅವರ ನಿಯೋಗವು ಕೋರಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 