ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
Shifting stray cattle to Goshala
ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
ಗದಗ 25: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉಂಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನೀರೀಕ್ಷಕ ಲಕ್ಷ್ಮಣ, ಹಿರಿಯಆರೋಗ್ಯ ನೀರೀಕ್ಷಕ ಎಂ.ಎಂ ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 