ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
Shifting stray cattle to Goshala
ಬೀದಿಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ
ಗದಗ 25: ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉಂಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನೀರೀಕ್ಷಕ ಲಕ್ಷ್ಮಣ, ಹಿರಿಯಆರೋಗ್ಯ ನೀರೀಕ್ಷಕ ಎಂ.ಎಂ ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 