ಶಿವಕಂಚಿ ಮಠದ : ಮಹಾದೇವ ತಾತನ ಸಂಭ್ರಮದ ರಥೋತ್ಸವ
Shivakanchi Math: Chariot festival in celebration of Mahadev Tata
ಹೂವಿನಹಡಗಲಿ 30: ತಾಲೂಕಿನ ಹೊಳಗುಂದಿ ಮತ್ತು ಮೊರಗೇರಿ ಮಾರ್ಗ ಮಧ್ಯ ಬರುವ ಶಿವ ಕಂಚಿ ಮಠದ ಶ್ರೀ ಸದ್ಗುರು ಮಹಾದೇವ ತಾತನ ರಥೋತ್ಸವ ಮಂಗಳವಾರ ಸಂಜೆ 5.30ಕ್ಕೆ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಟ್ರಸ್ಟ್ ಕಮಿಟಿ ಅದ್ಯಕ್ಷ ದಳಪತಿ ಕೊಟ್ರಗೌಡ ಪದಾಧಿಕಾರಿಗಳು,ಹೊಳಗುಂದಿ, ಉತ್ತಂಗಿ.ಇಟ್ಟಗಿ, ನಂದಿಹಳ್ಳಿ ಮೊರಗೇರಿ, ಹಗರಿಬೊಮ್ಮನಹಳ್ಳಿ. ವರದಾಪುರ, ಕೊಟ್ಟೂರು ಸೇರಿದಂತೆ ಅಪಾರ ಜನರು ಭಾಗವಹಿಸಿದ್ದರು. ಬೆಳಿಗ್ಗೆ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಭಕ್ತರು ಮಹಾದೇವ ತಾತನಿಗೆ ದೀಡ್ ನಮಸ್ಕಾರ ಹಾಕಿ ಹರಕೆಯನ್ನು ಸಲ್ಲಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 