ಸಿರುಗುಪ್ಪ: ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಚಾಲನೆ
Siruguppa: Fish stocking program launched
ಸಿರುಗುಪ್ಪ: ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಚಾಲನೆ
ಬಳ್ಳಾರಿ 18: ಸಿರುಗುಪ್ಪ ತಾಲ್ಲೂಕಿನ ಹೆರಕಲ್ ಗ್ರಾಮದ ತುಂಗಭದ್ರಾ ನದಿಭಾಗದಲ್ಲಿ ಮೀನುಮರಿ ದಾಸ್ತಾನು ಕಾರ್ಯಕ್ರಮಕ್ಕೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ್ ಅವರು ಸೋಮವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೀನು ಕೃಷಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಾಗೂ ಮೀನು ಉತ್ಪಾದನೆ ಹೆಚ್ಚಿಸಲು ಮೀನುಮರಿಗಳನ್ನು ಬಿತ್ತನೆ ಮಾಡಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಮೀನುಗಾರಿಕೆ ಉಪ ನಿರ್ದೇಶಕ ಶಿವಣ್ಣ, ಮುನಿರಾಬಾದ್ ಮೀನುಗಾರಿಕೆ ಉಪ ನಿರ್ದೇಶಕರಾದ ಕಣ್ಣಿ ಭಾಗ್ಯ, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಬಿ.ಭಾವನ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು, ಸ್ಥಳೀಯ ಮೀನುಗಾರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 