ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಕಾರ್ಯಗಾರ
Special workshop from Dharmasthala Rural Development Project
ಯರಗಟ್ಟಿ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸಕ್ತ ಸಾಲಿನಲ್ಲಿ ಅನ್ನದಾತರ ಜ್ಞಾನವರ್ಧನೆ ಮತ್ತು ಆರ್ಥಿಕ ಬಲವರ್ಧನೆಗಾಗಿ ಕೃಷಿ ಮತ್ತು ನೀರಾವರಿ ಕುರಿತು ವಿಶೇಷ ಕಾರ್ಯಗಾರವನ್ನು ಸಮೀಪದ ಮಬನೂರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಾ ಯೋಜನೆ ಅಧಿಕಾರಿ ಶ್ರೀಕಾಂತ. ಕೆ. ಚಾಲನೆ ನೀಡಿದರು.
ಕೃಷಿ ನೀರಾವರಿ ಕುರಿತು ಮಾತನಾಡಿದ ಪ್ರಗತಿಪರ ರೈತ ಈರನಗೌಡ ಪಾಟೀಲ ಅವರು ಭಾರತವು ಕೃಷಿ ಪ್ರಧಾನ ದೇಶವಾಗಿದೆ. ಬಹುತೇಕ ರೈತರು ಕೃಷಿ ಚಟುವಟಿಕೆಗಳಿಗೆ ಕೃತಕ ನೀರಿನ ಮೂಲಗಳನ್ನು ಬಳಸುತ್ತಾರೆ. ಪ್ರತಿ ಹನಿಗೂ ಹೆಚ್ಚಿನ ಬೆಳೆ’ ಎಂಬ ಪರಿಕಲ್ಪನೆಯ ಭಾಗವಾಗಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿ ಮಾಡಲಾಗಿದೆ.ಕೃಷಿ ಭೂಮಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿಯನ್ನು ಮಾಡಲು ಸಹಾಯಧವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ.
ಈ ವೇಳೆ ಕೃಷಿ ಅಧಿಕಾರಿ ನಾಗಪ್ಪ ನಾಯ್ಕ, ಸೇವಾ ಪ್ರತಿನಿಧಿ ಮಂಜುಳಾ ಬೀರದೇವರ, ನಾಗರಾಜ ನಾಯ್ಕ, ರೈತರಾದ ಕಿರಣಗೌಡ ಪಾಟೀಲ, ರೈತ ಮಹಿಳೆಯರಾದ ಸತ್ಯವ್ವ ಪಾಟೀಲ, ಸವಿತಾ ಪಾಟೀಲ, ಮಿನಾಕ್ಷಿ ಪಟಾತ, ರೇಣುಕಾ ಪಟಾತ, ಮಾಯವ್ವ ಪಟಾತ, ಶ್ರೀದೇವಿ ಭಾಗೋಜಿ, ಶೋಭಾ ಭಾಗೋಜಿ, ಲಕ್ಷ್ಮೀ ಈಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 