ಬಳ್ಳಾರಿ ಬಲಿಜ ಸಂಘದಿಂದ ಶ್ರೀ ಕೃಷ್ಣದೇವರಾಯ ಜಯಂತಿ ಆಚರಣೆ - ಸಾಧಕರಿಗೆ ಸನ್ಮಾನ
Sri Krishnadevaraya Jayanti celebrated by Bellary Balija Sangha - felicitated the ascetics
ಬಳ್ಳಾರಿ 17: ಬಳ್ಳಾರಿ ಜಿಲ್ಲಾ ಬಲಿಜ ಸಂಘದ ವತಿಯಿಂದ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಮಾಜದ ಪ್ರತಿಭೆಗಳನ್ನು ಗುರುತಿಸಿ ಗೌರವಿಸಲಾಯಿತು. ಬಳ್ಳಾರಿ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಬುಜ್ಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶ್ರೀ ಕೃಷ್ಣದೇವರಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಸಾಧಕರಿಗೆ ಗೌರವ ಸಮರೆ್ಣ: ವೇದಿಕೆಯಲ್ಲಿ ಸಮಾಜದ ಇಬ್ಬರು ಪ್ರಮುಖ ಸಾಧಕರನ್ನು ಸನ್ಮಾನಿಸಲಾಯಿತು: ಕುಮಾರಿ ತನುಜಾ ಶ್ರೀ: ಕೂಚಿಪುಡಿ ನೃತ್ಯದಲ್ಲಿ ವಿಶ್ವಮಟ್ಟದ ಸಾಧನೆ ಮಾಡಿ, 'ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಸ್ಥಾನ ಪಡೆದ ಕುಮಾರಿ ತನುಜಾ ಶ್ರೀ ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶ್ರೀ ಮುನಿಸ್ವಾಮಿ: ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಅನೇಕ ಸಾಮೂಹಿಕ ವಿವಾಹಗಳನ್ನು ಆಯೋಜಿಸಿದ ಸೇವೆಯನ್ನು ಗುರುತಿಸಿ ಲಭಿಸಿದ 'ಡಾಕ್ಟರೇಟ್' ಗೌರವ ಹಾಗೂ 'ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತರಾದ ಶ್ರೀ ಮುನಿಸ್ವಾಮಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಶ್ರೀ ರಮೇಶ್ ಬುಜ್ಜಿ ಅವರು, "ಶ್ರೀ ಕೃಷ್ಣದೇವರಾಯರು ಕೇವಲ ಒಬ್ಬ ಮಹಾನ್ ರಾಜನಲ್ಲ, ಅವರು ಸಾಹಿತ್ಯ, ಕಲೆ ಮತ್ತು ಧರ್ಮದ ಪರಮ ರಕ್ಷಕರಾಗಿದ್ದರು. ಅವರ ಆಡಳಿತ ಅವಧಿಯು ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗವಾಗಿತ್ತು. ಅವರ ಧೈರ್ಯ, ದೂರದೃಷ್ಟಿ ಮತ್ತು ಸಮಾನತೆಯ ಚಿಂತನೆಗಳು ಇಂದಿನ ಪೀಳಿಗೆಗೆ ದಾರೀದೀಪವಾಗಿವೆ," ಎಂದು ತಿಳಿಸಿದರು. ಈ ಸಂಭ್ರಮದ ಸಮಾರಂಭದಲ್ಲಿ ಸಮಾಜದ ಪ್ರಮುಖ ಮುಖಂಡರಾದ ತಿಪ್ಪೇಸ್ವಾಮಿ, ಉದಯ ಭಾಸ್ಕರ, ನಾರಾಯಣಪ್ಪ ಕೃಷ್ಣ,ರಂಗಸ್ವಾಮಿ ಶ್ರೀನಿವಾಸುಲು ಕೋಲ ಸುತ್ಯನಾರಾಯಣ ರಂಗನಾಥ್, ವೀರೇಶ್, ಪ್ರಭಾಕರ್ ಕುಮಾರಸ್ವಾಮಿ, ವಿಜಕುಮಾರ, ಬಿ. ಸಿ. ರಾಜೇಶ್, ಹಾಜರಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 