ರಾಜ್ಯ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಾಧೀಶರಾಗಿ ಶ್ರೀನಿವಾಸ್ ಓಕಾ ಪ್ರಮಾಣ ವಚನ
ಬೆಂಗಳೂರು, ಮೇ 6 ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಬಾಂಬೆ ಹೈ ಕೋರ್ಟ್ ಹಿರಿಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 10 ರ ಬೆ.10 ರಂದು ರಾಜಭವನ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಅಂದು ಓಕಾ ಅವರು ರಾಜ್ಯ ಹೈಕೋಟರ್್ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಓಕಾ ಅವರನ್ನು ಹೈಕೋಟರ್್ ಮುಖ್ಯ ನ್ಯಾಯಮೂರ್ತಿ ಗಳನ್ನಾಗಿ ನೇಮಕ ಮಾಡುವಂತೆಸರ್ವೋಚ್ಛ ನ್ಯಾಯಾಲಯದ ಕೊಲಿಜಿಯಂ ಕೇಂದ್ರ ಕಾನೂನು ಸಚಿವಾಲಯ ರಾಷ್ಟ್ರಪತಿ ಭವನಕ್ಕೆ ಶಿಫಾರಸು ಮಾಡಿತ್ತು. ಕೆಲವು ದಿನಗಳ ಹಿಂದೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಓಕಾ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದರು. 1960 ಮೇ 25 ರಂದು ಜನಿಸಿದ ಓಕಾ ಅವರು, ಬಾಂಬೆ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ, ಕಾನೂನು ಹಾಗೂ ಎಲ್ಎಲ್ಎಂ ಪದವಿ ಗಳಿಸಿದ್ದಾರೆ. ತಂದೆ ಶ್ರೀನಿವಾಸ ಓಕಾ ಸಹ ವಕೀಲರಾಗಿದ್ದು, ತಂದೆಯವರ ಕೈಕೆಳಗೆ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದರು. 2003 ರಲ್ಲಿ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಯಾಗಿ ನೇಮಕವಾಗಿದ್ದ ಓಕಾ ಅವರು 2005 ರಿಂದ ಖಾಯಂ ನ್ಯಾಯಮೂತರ್ಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 