ಶಾಲೆಗಳ ಉನ್ನತಿಕರಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ : ಬಾಬಾಸಾಹೇಬ ಪಾಟೀಲ
Students' future will be bright with the upgradation of schools: Babasaheb Patil
ನೇಸರಗಿ 23: .ಕ್ಷೇತ್ರದ ಶಾಲಾ ಕಾಲೇಜುಗಳ ಉನ್ನತಿಕರಣದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಭವಿಷ್ಯ ಉಜ್ಜಲ ಆಗುತ್ತದೆ ಮತ್ತು ದುರಸ್ತಿ ಇರುವ ಶಾಲಾ, ಕಾಲೇಜುಗಳ ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಾನು ಸದಾ ಪ್ರಯತ್ನ ಮಾಡಿ ಶಿಕ್ಷಣ ಕ್ಷೇತ್ರದ ವ್ಯವಸ್ಥೆಗೆ ಕೆಲಸ ಮಾಡುತ್ತಿದ್ದು ಅದರ ಸದುಪಯೋಗ ವಿದ್ಯಾರ್ಥಿಗಳು ಹಾಗೂ ಪಾಲಕರು ಪಡೆದುಕೊಳ್ಳಬೇಕೆಂದು ಕಿತ್ತೂರು ಚನ್ನಮ್ಮನ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು. ಅವರು ಸಮೀಪದ ಮಾಸ್ತಮರಡಿ ಗ್ರಾಮದಲ್ಲಿ ಮಂಗಳವಾರದಂದು 2024-25 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೊಠಡಿ ನಿರ್ಮಾಣದ ರೂ. 14,50,109-29 ಗಳ ಮೊತ್ತದಲ್ಲಿ ನಿರ್ಮಾಣ ಆಗಲಿರುವ ಶಾಲಾ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನೇಸರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಿಂಗಪ್ಪ ಅರಿಕೇರಿ, ಶಿವಾನಂದ ಕುಂಕುರ, ಎಸ್ ಡಿ ಎಮ್ ಸಿ ಅಧ್ಯಕ್ಷ ಸಿದ್ದಪ್ಪ ಮಿಂಡ್ರೋಳಿ,ಮಂಜುನಾಥ ಹುಲಮನಿ, ಮಲ್ಲೇಶ ಚಿಕ್ಕೋಡಿ, ಯಲ್ಲಪ್ಪ ಚಿಕ್ಕೋಪ್ಪ, ಸದೆಪ್ಪಾ ಬಸರಿಮರದ, ನಿಲ್ಲಪ್ಪ ಕಾಣಪ್ಪನವರ, ಮುಖ್ಯ್ಯೊಪಾಧ್ಯಾಯರಾದ ಭೀಮನಗೌಡ ನಾಯ್ಕರ, ಮಲ್ಲಪ್ಪ ತಿಗಡಿ, ಸೋಮಪ್ಪ ಸುಲದಾಳ, ಎ ಇ ಇ ಮಹೇಶ ಹೊಲಿ, ಮಾಲಾ ಬಡಿಗೇರ, ಪಿ ಡಿ ಓ ಶಿವಾನಂದ ಕಲ್ಲೂರ,ಸಿದ್ದಮಲ್ಲಪ್ಪ ಆಡಿನ ಸೇರಿದಂತೆ ಗ್ರಾಮದ ಮುಖಂಡರು, ಎಲ್ಲ ಸಮಾಜದ ಮುಖಂಡರು,ಗ್ರಾಮ ಪಂಚಾಯತ ಸದಸ್ಯರು, ಎಸ್ ಡಿ ಎಮ್ ಸಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 