ಜಾಲವಾದ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Students from Jalavada High School selected for district level
ದೇವರಹಿಪ್ಪರಗಿ 28: ತಾಲ್ಲೂಕಿನ ಜಾಲವಾದ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ರಸಪ್ರಶ್ನೆ ಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಯೋಗಾಯೋಗ ಪಬ್ಲಿಕ್ ಸ್ಕೂಲ್ ನಲ್ಲಿ ದಿ. 27ರಂದು ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ರಸಪ್ರಶ್ನೆ ಯಲ್ಲಿ ಜಾಲವಾದ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕುಮಾರಿ ಲಕ್ಷ್ಮಿ.ಬ.ಕಬಾಡಗಿ ಹಾಗೂ ಭಾಗ್ಯಶ್ರೀ.ಬ.ಕಬಾಡಗಿ ಇಬ್ಬರು ಸಹೋದರಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಂತರ ಸಿಂದಗಿಯ ಶಿಕ್ಷಣ ಸಂಯೋಜಕರಾದ ಸತ್ಯಪ್ಪ ಕಪನಿಂಬರಗಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರಸಪ್ರಶ್ನೆಯ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದ ಅರ್ಜುನ ಮಲ್ಲೇವಾಡಿ, ಗೀರೀಶ ಇನಾಮದಾರ, ಪಿ.ಎಸ್.ಅಗ್ನಿ ಹಾಗೂ ಕೆ.ಪಿ.ಎಸ್ ಶಾಲೆಯ ಎಸ್.ಜೆ.ನಾಟೀಕಾರ ಶಿಕ್ಷಕರು ಇದ್ದರು.ಎಲ್ಲರೂ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಲಿ ಎಂದು ಶುಭ ಹಾರೈಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 