ಬೆಳೆ ಕಟಾವು ಮೇಲ್ವಿಚಾರಣೆ ಮಾಡಿದ:ಡಾ ಕನ್ನೂರ
Supervised the crop harvesting: Dr. Kannur
ಇಂಡಿ 10: ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ರವರು ಹಿಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಗುಡಿ ಗ್ರಾಮದ ಮುಂಗಾರು ಹಂಗಾಮಿನ ತೋಗರಿ (ಮಳೆಯಾಶ್ರಿತ) ಬೆಳೆಯ ನಮೂನೆ 2ರ ಕಟಾವು ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಿದ ಅವರು 2025 - 2026 ನೇ ಸಾಲಿನ ಬೆಳೆ ಅಂದಾಜು ಸಮೀಕ್ಷೆ ಅಡಿಯಲ್ಲಿ ತಾಲೂಕಿನ ಹಿಂಗಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಬರಗುಡಿ ಗ್ರಾಮದಲ್ಲಿ ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗವನ್ನು ಮಾಡಿ.ಬೆಳೆ ಅಂದಾಜು ಸಮೀಕ್ಷೆ ಪ್ರಧಾನಮಂತ್ರಿ ಪಸಲ್ ಭೀಮಾ ಯೋಜನೆಯ ಹಾಗೂ ದೇಶದ ಆಮದು ರು್ತ ನಿರ್ಣಯಿಸುವಲ್ಲಿ ಪ್ರಮುಖ ಪಾತ್ರವಹಿಸುವುದರಿಂದ ಸಂಬಂಧಿಸಿದ ಅಧಿಕಾರಿಗಳು ನಿಯಮಾನುಸಾರವಾಗಿ ಪ್ರಯೋಗವನ್ನು ಕೈ ಗೊಳ್ಳಲು ಸೂಚನೆ ನೀಡಿದರು. ಈ ಸಮಯದಲ್ಲಿ ತಾಲೂಕ ಪಂಚಾಯತ್ ಸಿಬ್ಬಂದಿಗಳಾದ ರಾಜು ಚವ್ಹಾಣ ಎಂ ಬಿ ಕಲಾವಂತ, ಹಿಂಗಣಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ರಮೇಶ ಹೂಗಾರ, ಓರಿಯಂಟ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಮಲ್ಲಿಕಾರ್ಜುನ್ ಬಿರಾದಾರ ಗ್ರಾಮದ ರೈತರಾದ ಸುನೀಲ ಕ್ಷತ್ರಿ, ಸೋಮನಿಂಗ ಅಂಕಲಗಿ, ಲಕ್ಷ್ಮಣ ಶೆಂಡಗಿ, ಮಹಾದೇವ ಕಾಡಿಮಗೆರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 