ಶಿಕ್ಷಕಿ ಸುಜಾತಾಗೆ ಕ್ರಿಯಾಶೀಲ ಶಿಕ್ಷಕಿ ಪುರಸ್ಕಾರ
Teacher Sujatha receives Active Teacher Award
ಶಿಕ್ಷಕಿ ಸುಜಾತಾಗೆ ಕ್ರಿಯಾಶೀಲ ಶಿಕ್ಷಕಿ ಪುರಸ್ಕಾರ
ಹುಕ್ಕೇರಿ, 11 : ತಾಲೂಕಿನ ಹಂಚಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರಿಗೆ ಕ್ರಿಯಾಶೀಲ ಶಿಕ್ಷಕಿ ಪ್ರದಾನ ಮಾಡಲಾಯಿತು.
ಪಟ್ಟಣದಲ್ಲಿ ರವಿವಾರ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಮಠಾಧೀಶರು, ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಸುಜಾತಾ ನಾವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರು ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಈ ಪುರಸ್ಕಾರ ಕೊಡಮಾಡಿದೆ.
ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಶಿವಬಸವ ಸ್ವಾಮೀಜಿ, ಕ್ಯಾರಗುಡ್ಡ ಅವುಜೀಕರ ಧ್ಯಾನಯೋಗಾಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ, ಯುವ ಮುಖಂಡ ಪೃಥ್ವಿ ಕತ್ತಿ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ಸದಸ್ಯ ಮಹಾವೀರ ನಿಲಜಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ, ಬಿಇಒ ಪ್ರಭಾವತಿ ಪಾಟೀಲ, ಬಿಆರಿ್ಸ ಎ.ಎಸ್.ಪದ್ಮಣ್ಣವರ, ಬಿಸಿಯೂಟ ಯೋಜನೆ ಸಹಾಯಕಿ ನಿರ್ದೇಶಕಿ ಸವಿತಾ ಹಲಕಿ ಮತ್ತಿತರರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 