ದೇವದಾಸಿ ಮಹಿಳೆಯರ ಮರುಗಣತಿಯನ್ನು ಮನೆ ಮನೆಗೆ ತೆರಳಿ ನಡೆಸಲು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಒತ್ತಾಯ
ಗಜೇಂದ್ರಗಡ 02: ಇಂದು ನಗರದ ತಹಶಿಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷರಾದ ಬಾಲು ರಾಠೋಡ ಅವರು ಮಾತನಾಡಿ ಕಳೆದ ಎರಡು-ಮೂರು ದಶಕಗಳಿಂದ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ಹಾಗೂ ದೇವದಾಸಿ ಮಹಿಳೆಯರ ನಿರಂತರ ಮನವಿ ಹಾಗೂ ಒತ್ತಾಯದ ಮೇರೆಗೆ ರಾಜ್ಯ ಸರಕಾರವೂ ತಡವಾಗಿಯಾದರೂ,ಸಕಾರಾತ್ಮಕವಾಗಿ ಸ್ಪಂದಿಸಿ ದೇವದಾಸಿ ಮಹಿಳೆಯರ ಕುಟುಂಬದ ಮರುಗಣತಿಗೆ ನಡೆಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೊಂದು ಐತಿಹಾಸಿಕ ಕ್ರಮವಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘವು ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಆದರೆ, ಮರುಗಣತಿಯನ್ನು ದೇವದಾಸಿ ಮಹಿಳೆಯರ ಮನೆಮನೆಗೆ ತೆರಳಿ ಮಾಡುವಂತೆ ಅಗತ್ಯ ಕ್ರಮವಹಿಸಬೇಕು. ಈ ಹಿಂದೆ ಇಂತಹ ಗಣತಿಗಾಗಿ ತೊಡಗಿಸಿಕೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ನೌಕರರ ಮೂಲಕ ಗಣತಿಗೆ ಕ್ರಮವಹಿಸುವಂತೆ ಈ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಒತ್ತಾಸುತ್ತಿದ್ದೆವೆ.
ಇದನ್ನು ತಾಲೂಕಾ ಮಟ್ಟದಲ್ಲಿಯೋ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿಯೋ ನಡೆಸುವುದು ಸಾದ್ಯವಿಲ್ಲ ಹಾಗೆ ಮಾಡುವುದು ತೀವ್ರ ಭ್ರಷ್ಠಾಚಾರಕ್ಕೆ ಮತ್ತು ದೇವದಾಸಿ ಮಹಿಳೆಯರಲ್ಲದ ಇತರೆ ಮಹಿಳೆಯರು ಈ ಸೌಲಭ್ಯಗಳನ್ನು ಅನವಶ್ಯಕವಾಗಿ ಪಡೆಯಲು ಕಾರಣವಾಗುತ್ತದೆ. ಹಾಗಾಗಿ ಇಡೀ ದೇವದಾಸಿ ಮಹಿಳೆಯರ ಕುಟುಂಬದ ಎಲ್ಲ ಸದಸ್ಯರು ಈ ಗಣತಿಗೆ ದೊರೆಯಬೇಕಾದುದರಿಂದ ಅವರೆಲ್ಲರನ್ನು ಬೇರೊಂದು ಸ್ಥಳಗಳಿಗೆ ಕರೆಸಿ ಗಣತಿಗೆ ಮಾಡುವುದು ಆ ಕುಟುಂಬಗಳಿಗೆ ತೊಂದರೆದಾಯಕವಾಗಿದೆ. ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ,
ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಿ ಅವರ ಮೂಲಕವೇ ಮನೆ ಮನೆಗೆ ತೆರಳಿ ದೇವದಾಸಿ ಮಹಿಳೆಯರ ಮನೆಯ ಮುಂದುಗಡೆಯೇ ಗಣತಿ ಮಾಡುವುದು ಸೂಕ್ತವಾಗಿದೆ. ಈ ಕುರಿತಂತೆ ಸ್ಪಷ್ಟ ನಿಲುಮೆಯಿಂದ ಸರ್ಕಾರ ಈ ಕೆಲಸ ಮಾಡಬೇಕೆಂದು ಅವರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಹುಲಗೆಮ್ಮ ಮಾತಿನ ತಾಲ್ಲೂಕು ಅಧ್ಯಕ್ಷರಾದ ದುರಗವ್ವ ಮಾದರ ಮುಖಂಡರಾದ ಮಲ್ಲಿಕಾರ್ಜುನ ಮಾದರ, ಚಂದ್ರು ಹಾದಿಮನಿ, ಕಿಟ್ಟವ್ವ ಮಾದರ, ಕೇಶವ್ವ ಮಾದರ, ಕಳಕವ್ವ ಕೋತಬಾಳ, ಶಾಂತವ್ವ ಮಾದರ, ಕಸ್ತೂರವ್ವ ಮಾದರ, ಶಿವವ್ವ ಮಾದರ, ರೋಣವ್ವ ಮಾದರ, ಮರಿಯವ್ವ ಮೇಲಿನಮನಿ, ಶೇಕವ್ವ ಕರಡಿ, ಬಸವ್ವ ಚಿಕ್ಕಾಡಿ, ಹನಮವ್ವ ಹುನಗುಂದ, ಬೀಮವ್ವ ಹಾದಿಮನಿ, ದೇವಕ್ಕ ಬನ್ನಿಹಟ್ಟಿ ಮತ್ತು ಇತರರು ಹಾಜರಿದ್ದರು.