ನರೇಗಾ ಯೋಜನೆ ಒಕ್ಕಲುತನಕ್ಕೆ ವಿಸ್ತರಿಸುವಂತೆ ಒತ್ತಾಯ
ಬೆಳಗಾವಿ : ನರೇಗಾ ಯೋಜನೆಯನ್ನು ಒಕ್ಕಲುತನಕ್ಕೆ ವಿಸ್ತರಿಸುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಮಾಡಿ
ಕೊಂಡಿದ್ದಾರೆ.
ಈ ಕುರಿತು ಗುರುವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ರೈತರು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿಯೊಂದನ್ನು ಸಲ್ಲಿಸಿ, ಒಕ್ಕಲುತನ ಎಂದರೆ ಲಾಟರಿ ವ್ಯವಸ್ಥೆ ಇದ್ದಂತಿದೆ. ಇದರ ಸುಳಿಗೆ ಸಿಕ್ಕು ರೈತರು ನರಳುವಂತಾಗಿದೆ. ನರೇಗಾ ಯೋಜನೆ ಜನಪ್ರೀಯತೆಯಿಂದ ಒಕ್ಕಲುತನಕ್ಕೆ ಭಾರಿ ಹಡೆತ ಬಿದ್ದು, ರೈತರ ಜಮೀನುಗಳಲ್ಲಿ ಜನರು ಕೂಲಿ ಮಾಡದೆ ನರೇಗಾ ಯೋಜನೆಯಲ್ಲಿ ಈಡಿ ಊರಿಗೆ ಊರುಗಳೆ ಕೆಲಸ ನಿರ್ವಹಿಸುತ್ತಿವೆ.
ರೈತರ ಜಮೀನುಗಳಲ್ಲಿ ಕೂಲಿಗೆ ಕೆಲಸಗಾರರು ಸಿಗದ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನರೇಗಾ ಯೋಜನೆಯನ್ನು ಒಕ್ಕಲುತನಕ್ಕೆ ವಿಸ್ತರಿಸುವಂತೆ ಮನವಿ ಮೂಲಕ ಒತ್ತಾಯಿಸಿದ್ದಾರೆ. ಇಂದಿನ ಪ್ರತಿಭಟನೆಯಲ್ಲಿ ರೈತ ಮುಖಂಡ ಅಪ್ಪಾಸಾಹೇಬ ದೇಸಾಯಿ, ಸುಭಾಶ ದಾಯಗೊಂಡ, ಬಾಳು ಮಾಯಣ್ಣಾ, ರಾಮಚಂದ್ರ ಫಡಕೆ ಸೇರಿದಂತೆ ಅನೇಕು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 