ಚುನಾವಣಾ ದಿನಾಂಕ ಬದಲಿಸಬೇಕೆಂಬ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ, ಏ.4-ತಮಿಳುನಾಡು ಮತ್ತು ಪುದುಚೇರಿಯಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿ ಯೊಂದನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿದೆ.
ಗುಡ್ ಫೈಡೇ ಮತ್ತು ಈಸ್ಟರ್ನ ಪವಿತ್ರ ಆಚರಣೆ ಸಂದರ್ಭದಲ್ಲೇ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗಳು ಘೋಷಣೆಯಾಗಿವೆ. ಆದ ಕಾರಣ ಮತದಾನ ದಿನಾಂಕದ ವೇಳಾಪಟ್ಟಿಯನ್ನು ಬದಲಿಸುವಂತೆ ಕ್ರೈಸ್ತರ ಸಂಸ್ಥೆಯೊಂದು ಸುಪ್ರೀಂ ಸಲ್ಲಿಸಿತ್ತು.
ಈ ಅರ್ಜಿ ಪುರಸ್ಕರಿಸಲು ನಿರಾಕರಿಸಿ ನ್ಯಾಯಮುರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಪವಿತ್ರ ದಿನದಂದು ಮತ ಚಲಾಯಿಸಲು ಸಾಧ್ಯವಾಗುವುದಿಲ್ಲವೇ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು.
ನೀವು ಹೇಗೆ ಪ್ರಾರ್ಥಿಸ ಮತ್ತು ಹೇಗೆ ಮತ ಚಲಾಯಿಸಬೇಕು ಎಂಬುದನ್ನು ತಿಳಿಸಲು ನ್ಯಾಯಾಲಯ ಬಯಸುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 