ಸಂಕ್ರಮಣದ ನಿಮಿತ್ಯ ಸಂಭ್ರಮದ ತೆಪ್ಪೋತ್ಸವ
ಲೋಕದರ್ಶನ ವರದಿ
ಮುನವಳ್ಳಿ 16: ಜ. 15 ರಂದು ಸಾಯಂಕಾಲ 5.30 ಗಂಟೆಗೆ ಇಲ್ಲಿನ ಶಿಂದೋಗಿ-ಮುನವಳ್ಳಿಯ ಕುಮಾರೇಶ್ವರ ಆಲೂರಮಠದ ವತಿಯಿಂದ ಮಲಪ್ರಭಾ ನದಿಯಲ್ಲಿ ಮಕರ ಸಂಕ್ರಮಣದ ನಿಮಿತ್ಯ ತೆಪ್ಪೋತ್ಸವ ಸಂಭ್ರಮ ಹಾಗೂ ವಿಜೃಂಭಣೆಯಿಂದ ಜರುಗಿತು.
ತೆಪ್ಪೋತ್ಸವದ ತೇರಿನಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಆಸೀನರಾಗಿ ಭಕ್ತರಿಗೆ ದರ್ಶನಾಶೀವರ್ಾದ ನೀಡಿದರು. ಈ ಸಂದರ್ಭದಲ್ಲಿ ಸೋಮಶೇಖರಮಠದ ಮುರುಘೇಂದ್ರ ಸ್ವಾಮೀಜಿ, ಸವದತ್ತಿ ಸ್ವಾದಿಮಠದ ಶಿವಬಸವ ಸ್ವಾಮೀಜಿ, ಕಲ್ಮಠದ ಶಿವಲಿಂಗ ಸ್ವಾಮೀಜಿ, ಶಿಂದೋಗಿಯ ಮಡಿವಾಳಯ್ಯಸ್ವಾಮಿ ಹಿರೇಮಠ, ಈರಯ್ಯಸ್ವಾಮಿ ಹಿರೇಮಠ ಹಾಗೂ ಶಿಂದೋಗಿ-ಮುನವಳ್ಳಿ ಸಮಸ್ತ ಸದ್ಭಕ್ತರು ಉಪಸ್ಥಿತರಿದ್ದರು. ಉತ್ತತ್ತಿ ಹಾಗೂ ಬಾಳೆಹಣ್ಣುಗಳನ್ನು ತೆಪ್ಪದತ್ತ ಭಕ್ತರು ಭಕ್ತಿಭಾವದಿಂದ ಹಾರಿಸುತ್ತಿದ್ದರು. ಕಾರ್ಯಕ್ರಮದ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 